Political News: ಇಂದು ಕೇಂದ್ರ ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಟೀಕೆ ಮಾಡಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ 2024-25ರ ಮಧ್ಯಂತರ ಆಯವ್ಯಯ ಪತ್ರದಲ್ಲಿ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಸನ್ಮಾನ್ಯ ನರೇಂದ್ರ ಮೋದಿ ಅವರು ನಿರ್ಮಿಸಿರುವ ‘‘ವಿನಾಶಕಾರಿ ಭಾರತ’’ದ ವಾಸ್ತವವನ್ನು ಬಚ್ಚಿಟ್ಟು ‘‘ವಿಕಸಿತ ಭಾರತ’’ ಎಂಬ ಭ್ರಮಾಲೋಕವನ್ನು ದೇಶದ ಜನತೆಗೆ ಮಾರಾಟ ಮಾಡಲು ಪ್ರಯತ್ನಿಸಿದ್ದಾರೆ.
ಬಡವರು, ಮಹಿಳೆಯರು, ಯುವಕರು ಮತ್ತು ರೈತರನ್ನೊಳಗೊಂಡ ನಾಲ್ಕು ‘‘ಜಾತಿ’’ಗಳ ಅಭಿವೃದ್ದಿಯ ಮೇಲೆ ಪ್ರಧಾನಿ ನರೇಂದ್ರ ಮೋದಿಯವರು ನಂಬಿಕೆ ಇಟ್ಟಿದ್ದಾರೆ ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ಇದನ್ನೆ ‘’ವಿಕಸಿತ ಭಾರತ’’ದ ಕನಸು ಎಂದು ಅವರು ಹೇಳಿಕೊಂಡಿದ್ದಾರೆ. ನರೇಂದ್ರ ಮೋದಿಯರ ಹತ್ತು ವರ್ಷಗಳ ಆಡಳಿತದಲ್ಲಿ ಕಷ್ಟ,ನಷ್ಟ, ದಮನ, ದೌರ್ಜನ್ಯಕ್ಕೀಡಾಗಿರುವುದು ಇದೇ ಬಡವರು, ಮಹಿಳೆಯರು, ಯುವಕರು ಮತ್ತು ರೈತರು. ಈ ಸಮುದಾಯಗಳ ಪಾಲಿಗೆ ಮೋದಿಯವರ ಹತ್ತು ವರ್ಷಗಳ ಆಡಳಿತ ‘‘ವಿಕಸಿತ ಭಾರತ’’ ಅಲ್ಲ ಅದು ‘‘ವಿನಾಶಕಾರಿ ಭಾರತ’’ ಎಂದು ಟೀಕಿಸಿ, ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ..
ದೇಶದ ಸಾರ್ವಭೌಮತೆ ಇರಬೇಕು. ಆದರೆ ರಾಜ್ಯಗಳಿಗೆ ಅವರ ಪಾಲು ಕೊಡಬೇಕು. ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಗಳ ಪಾಲನ್ನು ಕೊಡುತ್ತಿಲ್ಲ. ರಾಯಚೂರು ಜಿಲ್ಲೆಗೆ ಎಮ್ಸ್ ಸ್ಥಾಪನೆಗೆ ಒತ್ತಾಯಿಸಿದ್ದೆವು, ಪ್ರಯೋಜನ ಆಗಿಲ್ಲ. ನಮ್ಮಿಂದ 4 ಲಕ್ಷ ಕೋಟಿ ತೆರಿಗೆ ವಸೂಲಿ ಮಾಡುವ ಕೇಂದ್ರ ಸರ್ಕಾರ ನಮಗೆ, ನಮ್ಮ ನಾಡಿಗೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ. ಅಖಂಡ ಭಾರತ, ಅಖಂಡ ಕರ್ನಾಟಕ ಉಳಿಯಬೇಕು. ಇದಕ್ಕಾಗಿ ರಾಜ್ಯಗಳ ಪಾಲನ್ನು ಚಾಚೂ ತಪ್ಪದೆ ಕೊಡಬೇಕು.
ಬಿಜೆಪಿ ಆಳ್ವಿಕೆಯ ಈ ‘‘ವಿನಾಶಕಾರಿ ಭಾರತ’’ದಲ್ಲಿ ದೇಶದ ಎಲ್ಲ ಜಾತಿ-ಧರ್ಮಗಳ ಬಡವರು, ರೈತರು, ಕಾರ್ಮಿಕರು, ಮಹಿಳೆಯರು ಹಾಗೂ ವಿಶೇಷವಾಗಿ ದಲಿತ ಹಿಂದುಳಿದ ಜಾತಿಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳು ದಮನಕ್ಕೀಡಾಗಿದ್ದಾರೆ, ಅವರ ಸಾಮಾಜಿಕ ಮತ್ತು ಆರ್ಥಿಕ ಬದುಕು ಅಧ:ಪತನಗೊಂಡಿದೆ. ಈ ದೃಷ್ಟಿಯಲ್ಲಿ ನಾವಿಂದು ಪ್ರಜಾಪ್ರಭುತ್ವದ ‘‘ಅಮೃತ ಕಾಲ’’ದಲ್ಲಿ ಇಲ್ಲ, ‘‘ಮೃತ ಕಾಲ’’ದಲ್ಲಿದ್ದೇವೆ ಎಂದು ಸಿದ್ದರಾಮಯ್ಯ ಬಜೆಟ್ ಬಗ್ಗೆ ಟೀಕೆ ಮಾಡಿದ್ದಾರೆ.
ಇದೇ ರೀತಿ ಸಾಲು ಸಾಲು ಟ್ವೀಟ್ ಮಾಡಿ ಬಜೆಟ್ ಬಗ್ಗೆ ಸಿದ್ದರಾಮಯ್ಯ ಟೀಕೆ ಮಾಡಿದ್ದು, ಆ ಟ್ವೀಟ್ ಇಂತಿದೆ.
"ಇದು ವಿಕಸಿತ ಭಾರತ ಅಲ್ಲ ವಿನಾಶಕಾರಿ ಭಾರತದ ಬಜೆಟ್"
ಹಣಕಾಸು ಸಚಿವೆ @nsitharaman ಅವರು ಇಂದು ಮಂಡಿಸಿದ 2024-25ರ ಮಧ್ಯಂತರ ಆಯವ್ಯಯ ಪತ್ರದಲ್ಲಿ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಸನ್ಮಾನ್ಯ @narendramodi ಅವರು ನಿರ್ಮಿಸಿರುವ ‘‘ವಿನಾಶಕಾರಿ ಭಾರತ’’ದ ವಾಸ್ತವವನ್ನು ಬಚ್ಚಿಟ್ಟು ‘‘ವಿಕಸಿತ ಭಾರತ’’ ಎಂಬ ಭ್ರಮಾಲೋಕವನ್ನು ದೇಶದ ಜನತೆಗೆ… pic.twitter.com/RQ0xzst80f
— Siddaramaiah (@siddaramaiah) February 1, 2024
ಮುಖ್ಯಮಂತ್ರಿಯಾಗಿ ಮಂಡಿಸಿರುವ ಏಳು ಆಯವ್ಯಯ ಪತ್ರಗಳಲ್ಲಿ ನಾನು ಬಡವರು, ಮಹಿಳೆಯರು, ಯುವಕರು ಮತ್ತು ರೈತರನ್ನೇ ಕೇಂದ್ರವಾಗಿಟ್ಟುಕೊಂಡು ಅಭಿವೃದ್ದಿ ಯೋಜನೆಗಳನ್ನು ರೂಪಿಸಿದ್ದೆ. ಬಹಳ ಮುಖ್ಯವಾಗಿ ನಮ್ಮ ಹೊಸ ಸರ್ಕಾರ ಅನುಷ್ಠಾನಗೊಳಿಸಿರುವ ಗ್ಯಾರಂಟಿ ಯೋಜನೆಗಳು ಕೂಡಾ ಈ ಬಡವರು, ಮಹಿಳೆಯರು, ಯುವಕರು ಮತ್ತು ರೈತರ ಕಲ್ಯಾಣವನ್ನೇ…
— Siddaramaiah (@siddaramaiah) February 1, 2024
ದೇಶದ ಸಾರ್ವಭೌಮತೆ ಇರಬೇಕು. ಆದರೆ ರಾಜ್ಯಗಳಿಗೆ ಅವರ ಪಾಲು ಕೊಡಬೇಕು. ಕೇಂದ್ರ @BJP4India ಸರ್ಕಾರ ರಾಜ್ಯಗಳ ಪಾಲನ್ನು ಕೊಡುತ್ತಿಲ್ಲ. ರಾಯಚೂರು ಜಿಲ್ಲೆಗೆ ಎಮ್ಸ್ ಸ್ಥಾಪನೆಗೆ ಒತ್ತಾಯಿಸಿದ್ದೆವು, ಪ್ರಯೋಜನ ಆಗಿಲ್ಲ. ನಮ್ಮಿಂದ 4 ಲಕ್ಷ ಕೋಟಿ ತೆರಿಗೆ ವಸೂಲಿ ಮಾಡುವ ಕೇಂದ್ರ ಸರ್ಕಾರ ನಮಗೆ, ನಮ್ಮ ನಾಡಿಗೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ.…
— Siddaramaiah (@siddaramaiah) February 1, 2024
ಜನರ ಮುಂದೆ ಮುಚ್ಚಿಟ್ಟಿರುವುದೇ ಹೆಚ್ಚು. ದೇಶದ ಆರ್ಥಿಕ ಪರಿಸ್ಥಿತಿಯನ್ನು ಬಿಚ್ಚಿಟ್ಟಿಲ್ಲ. ನಿರುದ್ಯೋಗ, ಬೆಲೆಯೇರಿಕೆ, ಬರಗಾಲ , ರೈತರ ಸಮಸ್ಯೆಗಳ ಬಗ್ಗೆ ಪ್ರಸ್ತಾಪವೇ ಇಲ್ಲ. ಬಜೆಟ್ ನ 47 ಲಕ್ಷ ಕೋಟಿ ರೂ.ಗಳಲ್ಲಿ 16,85494 ಕೋಟಿ ರೂ ಸಾಲ ಮಾಡಿದ್ದಾರೆ. ಬೆಳೆ ಪರಿಹಾರವನ್ನು ಬಜೆಟ್ ನಲ್ಲಿ ಹೇಳಿಲ್ಲ. ಎಂ.ಎಸ್.ಪಿ ಗೆ ಕೆಲವು ಬೆಳೆಗಳನ್ನು…
— Siddaramaiah (@siddaramaiah) February 1, 2024
ದೇಶದ ಮಹಿಳೆಯರು, ರೈತರು ಹಾಗೂ ಯುವಜನತೆಯ ಭವಿಷ್ಯದ ಮೇಲೆ ನೇರವಾಗಿ ಸಕಾರಾತ್ಮಕ ಪರಿಣಾಮ ಬೀರುವ ಯಾವುದೇ ಗುಣಾತ್ಮಕ ಸಂಗತಿಗಳನ್ನು ಈ ಬಜೆಟ್ ಹೊಂದಿಲ್ಲ. ಇಡೀ ದೇಶದಲ್ಲಿಯೇ ಮಧ್ಯಮ, ಸಣ್ಣ, ಅತೀ ಸಣ್ಣ ಕೈಗಾರಿಕೆಗಳು ಕೇಂದ್ರ ಸರ್ಕಾರದಿಂದ ಯಾವುದೇ ಗುಣಾತ್ಮಕ ನೆರವಿಲ್ಲದೆ ಸಾಲುಸಾಲಾಗಿ ಮುಚ್ಚಿಕೊಂಡಿವೆ. ಕೋವಿಡ್ನಲ್ಲಿ ನಿಂತ ಇವುಗಳ ಪ್ರಗತಿಯ…
— Siddaramaiah (@siddaramaiah) February 1, 2024
ಇದು ಕೇವಲ ಕಣ್ಕಟ್ಟಿನ ಆಯವ್ಯಯ ಪತ್ರವಾಗಿದ್ದು ಅಂಕಿ ಸಂಖ್ಯೆಗಳನ್ನು ಕೇಂದ್ರ @BJP4India ಸರ್ಕಾರವು ತನ್ನ ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿರುವುದು ಸ್ಪಷ್ಟವಾಗಿದೆ. ಕೇಂದ್ರ ಸರ್ಕಾರವು 25 ಕೋಟಿ ಮಂದಿಯನ್ನು ಬಡತನದ ತೆಕ್ಕೆಯಿಂದ ಹೊರತಂದಿರುವುದಾಗಿ ಹೇಳುತ್ತಿದೆ. ವಾಸ್ತವದಲ್ಲಿ ಜನತೆಯನ್ನು ಬಡತನದಿಂದ ಹೊರತರುವ ಯಾವುದೇ ನಿರ್ದಿಷ್ಟ…
— Siddaramaiah (@siddaramaiah) February 1, 2024
ತಮ್ಮ ಸಾಧನೆಗಳ ಬಗ್ಗೆ ಭಾಷಣಗಳಲ್ಲಿ ಸುಳ್ಳುಗಳನ್ನು ಹೇಳಿದ ಹಾಗೆ ಅಧಿಕೃತ ದಾಖಲೆಯಾಗಿರುವ ಆಯವ್ಯಯ ಪತ್ರದಲ್ಲಿ ಸುಳ್ಳುಗಳನ್ನು ಹೇಳಲಾಗುವುದಿಲ್ಲ. ಈ ಕಾರಣಕ್ಕಾಗಿ @nsitharaman ಅವರು ತಮ್ಮ ಭಾಷಣವನ್ನು ಕೇವಲ ಒಂದು ಗಂಟೆಗೆ ಸೀಮಿತಗೊಳಿಸಿ ಕೇವಲ 28 ಪುಟಗಳಲ್ಲಿ ಮುಗಿಸಿಬಿಟ್ಟಿದ್ದಾರೆ.
ದೇಶವನ್ನು ಸಾಲದ ಕೂಪಕ್ಕೆ ತಳ್ಳುತ್ತಿರುವ…— Siddaramaiah (@siddaramaiah) February 1, 2024
‘ಜ್ಞಾನ ವ್ಯಾಪಿ ಎಂಬ ಹೆಸರಿನ ಮಸೀದಿ ಎಲ್ಲಿಯೂ ಇಲ್ಲ. ಔರಂಗಜೇಬ್ ಒಡೆದ ದೇವಸ್ಥಾನ ಅದು.’
2024ರ ಕೇಂದ್ರ ಬಜೆಟ್ನಲ್ಲಿ ಲಕ್ಷದ್ವೀಪದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ
ತಮ್ಮ ಅಧಿಕಾರಾವಧಿಯ ಯೋಜನೆಗಳ ಸಾಧನೆ ವಿವರಿಸಿದ ಸಚಿವೆ ನಿರ್ಮಲಾ ಸೀತಾರಾಮನ್