Political News: ಧಾರವಾಡ : ನೂತನ ಸಂಸತ್ ಭವನಕ್ಕೆ ಮೋದಿ ಮಲ್ಟಿಕಾಂಪ್ಲೆಕ್ಸ್ ಅಂತ ಕರೆದಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕ್ಷುಲ್ಲಕ ಹೇಳಿಕೆ ಕೊಟ್ಟಿದ್ದಾರೆ. ಇದು ಅವರ ಮಾನಸಿಕತೆ ತೋರಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ಮಾಡಿದ್ದಾರೆ. ಜಿಲ್ಲೆಯ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿ ಮಾತನಾಡಿದ ಅವರು, ಯಾವುದೇ ಒಳ್ಳೆಯ ಕೆಲಸವನ್ನು ಕಾಂಗ್ರೆಸ್ ನಾಯಕರು ಸಹಿಸಲ್ಲ. ಇದು ಕಾಂಗ್ರೆಸ್ನವರ ಕೀಳುಮಟ್ಟದ ರಾಜಕಾರಣ ಎಂದು ಕಿಡಿಕಾರಿದ್ದಾರೆ.
ಎಲ್ಲದರಲ್ಲೂ ಕಾಂಗ್ರೆಸ್ ಪಕ್ಷ ಚಿಲ್ಲರೆ ರಾಜಕಾರಣ ಮಾಡುತ್ತದೆ. ಅವರ ಡಿಎನ್ಎದಲ್ಲಿ ಚಿಲ್ಲರೆ ರಾಜಕಾರಣ ಹೊಕ್ಕು ಬಿಟ್ಟಿದೆ. ಆದಿವಾಸಿ ಮಹಿಳೆಯನ್ನು ಬಿಜೆಪಿ ರಾಷ್ಟ್ರಪತಿ ಮಾಡಿದೆ. ರಾಷ್ಟ್ರಪತಿಗಳ ಹೆಸರಿನಲ್ಲೂ ಕಾಂಗ್ರೆಸ್ ರಾಜಕಾರಣ ಮಾಡುತ್ತೆ ಎಂದು ಹರಿಹಾಯ್ದಿದ್ದಾರೆ.
ಕಾಂಗ್ರೆಸ್ನವರಿಗೆ ಕನಸಲ್ಲೂ ಪ್ರಧಾನಿ ಮೋದಿ ಕಾಣಿಸುತ್ತಾರೆ
ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯೆ ನೀಡದಿರುವುದು ಒಳ್ಳೆಯದು. ರಾಹುಲ್ ಗಾಂಧಿ ತಾವು ಮಾತಾಡಿದರೆ ಭೂಕಂಪ ಆಗುತ್ತೆ ಅಂತಾರೆ. ಇಂತಹ ಚಿಲ್ಲರೆ ಮಾತಿಗೆ ಉತ್ತರ ಕೊಡದಿರುವುದು ಒಳ್ಳೆಯದು. ಪ್ರಧಾನಿ ನರೇಂದ್ರ ಮೋದಿಯವರನ್ನು ಏನಾದ್ರೂ ಬೈಯ್ಯೋದೆ ಇವರ ಕೆಲಸ.
ಮೊನ್ನೆ ಕೆಲವು ಕಡೆ ಮಳೆಯಾಗದೆ ಇರೋದಕ್ಕೆ ಮೋದಿರನ್ನು ಬೈದಿದ್ದಾರೆ. ಪ್ರವಾಹ ಬಂದರೂ ಮೋದಿ ಕಾರಣ, ಬರ ಬಂದರೂ ಮೋದಿ ಕಾರಣ. ಕಾಂಗ್ರೆಸ್ನವರಿಗೆ ಕನಸಲ್ಲೂ ಮೋದಿ ಕಾಣಿಸುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.
ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ. ಕಾಂಗ್ರೆಸ್ನವರು ಸುಳ್ಳು ಹೇಳುವುದರಲ್ಲಿ ನಿಸ್ಸಿಮರು. ಮಹಿಳಾ ಮೀಸಲಾತಿ ಜಾರಿ ಆಗೇ ಆಗುತ್ತೆ. ಕಾಂಗ್ರೆಸ್ನವರು ಅಧಿಕಾರಕ್ಕೆ ಬರುವುದಿಲ್ಲ ಎಂದರು.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿದ ಅವರು, ಇಂತಹ ಬೆಳವಣಿಗೆ ಆದಾಗ ಚರ್ಚೆಗಳು ನಡೆಯುವುದು ಸಹಜ. ಅದರಿಂದ ಅಮೃತವೇ ಹೊರಬರುತ್ತದೆ ಎಂದು ಹೇಳಿದ್ದಾರೆ.
ಹೆಬ್ಬಾಳ್ಕರ್ ಲಿಂಗಾಯತ ಲೀಡರ್ ಅಂತಾ ಹೇಳೋ ಅವಶ್ಯಕತೆ ಇದೆಯಾ? ಸಂತೋಷ ಲಾಡ್…..!
ಹೈಕಮಾಂಡ್ ಭೇಟಿ ಬಳಿಕ ಮಾಜಿ ಸಿಎಂ ಸೋದರ ಫುಲ್ ಸೈಲೆಂಟ್; ಬಿಗ್ ಆಫರ್ ಒಪ್ಕೊಂಡ್ರಾ ಶೆಟ್ಟರ್?