Hubballi News: ಹುಬ್ಬಳ್ಳಿ: ಲೋಕಸಭಾ ಚುನಾವಣೆ ಯಾವುದೇ ಸಂದರ್ಭದಲ್ಲಿ ಬರಲಿ, ಈ ಬಾರಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ವೀರಪ್ಪ ಮೊಯ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆಗೆ ಕಾಂಗ್ರೆಸ್ ಪಕ್ಷ ತಯಾರಿದೆ. ರಾಷ್ಟ್ರ ಹಾಗೂ ರಾಜ್ಯದಲ್ಲಿ ಅತಿಹೆಚ್ಚು ಸೀಟ್’ಗಳನ್ನು ಕಾಂಗ್ರೆಸ್ ಪಡೆದು ಅಧಿಕಾರಕ್ಕೆ ಬರಲಿದೆ ಎಂದರು.
ಮತ್ತೊಂದು ಪ್ರಧಾನಿಯಾಗಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡುವುದೇ ನಮ್ಮ ಗುರಿ ಎಂಬ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ, ಜೆಡಿಎಸ್ ಅವರು ಲೋಕಸಭೆಯಲ್ಲಿ ಎಷ್ಟು ಸೀಟ್ ಗೆಲ್ಲುತ್ತಾರೆ ಎಂಬುದು ಮುಖ್ಯ. ಪ್ರಧಾನಿ ಮಾಡಲು ಅವರ ಕೊಡುಗೆ ಏನೂ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ಅವರಿಗೆ ಬಿಜೆಪಿಯ ಸಹಾಯ ಇಲ್ಲದೇ ಹೋದರೇ ರಾಜಕೀಯದಲ್ಲಿ ಅಸ್ತಿತ್ವವೇ ಇಲ್ಲ ಎಂಬ ಭಾವನೆ ಅವರಲ್ಲಿದೆ ಹಾಗಾಗಿ ಇಂತಹ ಮಾತುಗಳು ಅವರಿಂದ ಬರುತ್ತಿವೆ ಎಂದು ಕಿಡಿಕಾರಿದರು.
ಈ ಹಿಂದೆ ಜೆಡಿಎಸ್ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿತ್ತು. ಆಗ ಕಾಂಗ್ರೆಸ್ ಬಲದಿಂದ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ರು, ದೇವೇಗೌಡರು ಪ್ರಧಾನಿ ಕೂಡಾ ಆಗಿದ್ರು, ಅವರು ಮಾಡುವುದು ಸ್ವಾರ್ಥಕ್ಕೆ ಹೊರತು, ರಾಜ್ಯ ಹಾಗೂ ದೇಶದ ಹಿತದೃಷ್ಟಿಯಿಂದ ಅಲ್ಲ ಎಂದು ಹರಿಹಾಯ್ದರು.
ಭ್ರಷ್ಟಾಚಾರದ ರಾಯಭಾರಿ ಸಿದ್ದರಾಮಯ್ಯ ಎಂಬ ಆರ್.ಆಶೋಕ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಈಗಾಗಲೇ ರಾಜ್ಯದ ಜನತೆ ಭ್ರಷ್ಟಾಚಾರ ಮಾಡಿದವರು ಯಾರು ಎಂಬುದಕ್ಕೆ ಸ್ಪಷ್ಟವಾಗಿ ಉತ್ತರ ಕೊಟ್ಟಿದ್ದಾರೆ. ದೇಶದಲ್ಲಿ ಭ್ರಷ್ಟಾಚಾರ ಮಾಡಿ ಜೈಲಿಗೆ ಹೋದ ಮುಖ್ಯಮಂತ್ರಿ ಯಾರೆಂದರೆ ಯಡಿಯೂರಪ್ಪ ಅವರು ಮಾತ್ರ, ಹೀಗಾಗಿ ಬಿಜೆಪಿಯವರಿಂದ ಭ್ರಷ್ಟಾಚಾರದ ಪಾಠ ಕೇಳಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಕಿಡಿಕಾರಿದರು.
ಇದೇ ವೇಳೆ ತೆಲಂಗಾಣ, ಕರ್ನಾಟಕದಲ್ಲಿ ಕಾಂಗ್ರೆಸ್ ಲೋಕಸಭೆಯಲ್ಲಿ ಅತಿಹೆಚ್ಚು ಸ್ಥಾನ ಗೆಲ್ಲವು ಸಾಧಿಸುತ್ತೆ ಎಂದರು.
ಕರ್ನಾಟಕ ಟಿವಿ ಮುಖ್ಯಸ್ಥರಾದ ಶಿವು ಬೆಸಗರಹಳ್ಳಿ ಅವರಿಗೆ ‘ಮಾಧ್ಯಮ ರತ್ನ’ ಪ್ರಶಸ್ತಿ
ರಜತ್ ಒತ್ತಡಕ್ಕೆ ಮಣಿದ ಜೋಶಿ: ಕೇಂದ್ರ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಉಳ್ಳಾಗಡ್ಡಿಮಠ
‘ಸರ್ಕಾರವನ್ನು ಕೈಗೊಂಬೆಯಂತೆ ಡಿಕೆಶಿ ಆಡಿಸುತ್ತಿದ್ದಾರೆ. ಜನರೇ ಇವರಿಗೆ ತಕ್ಕ ಉತ್ತರ ನೀಡುತ್ತಾರೆ’