Sports News: ಬೆಂಗಳೂರು : ನಾಳೆ (ಭಾನುವಾರ) ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಐದನೇ ಹಾಗೂ ಕೊನೆಯ ಟಿ-20 ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಈ ಕ್ರೀಡಾಂಗಣದಲ್ಲಿ 6 ಟಿ-20 ಪಂದ್ಯಗಳನ್ನು ಆಡಿದ್ದು, ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಆಸ್ಟ್ರೇಲಿಯಾ ತಂಡ ಬೆಂಗಳೂರಿನಲ್ಲಿ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದಿದೆ.
5 ಪಂದ್ಯಗಳ ಟಿ-20 ಸರಣಿಯಲ್ಲಿ ಭಾರತ ಈಗಾಗಲೇ 3-1 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಸರಣಿ ವಶಪಡಿಸಿಕೊಂಡಿದೆ. ನಾಳೆಯ ಪಂದ್ಯವನ್ನು ಗೆದ್ದು ಆಸಿಸ್ ಪಡೆಗೆ ಶಾಕ್ ನೀಡಲು ಸೂರ್ಯಕುಮಾರ್ ಯಾದವ್ ನೇತೃತ್ವದ ಯುವ ಪಡೆ ಸಜ್ಜಾಗಿದೆ.
ಭಾರತ ತಂಡ:
ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಜಿತೇಶ್ ಶರ್ಮಾ, ರಿಂಕು ಸಿಂಗ್, ಮುಖೇಶ್ ಕುಮಾರ್, ದೀಪಕ್ ಚಾಹರ್, ಅವೇಶ್ ಖಾನ್, ಅಕ್ಷರ್ ಪಟೇಲ್ ಮತ್ತು ರವಿ ಬಿಷ್ಣೋಯ್
ಆಸ್ಟ್ರೇಲಿಯ ತಂಡ:
ಮ್ಯಾಥ್ಯೂ ವೇಡ್ (ನಾಯಕ), ಜೋಶ್ ಫಿಲಿಪ್, ಟ್ರಾವಿಸ್ ಹೆಡ್, ಬೆನ್ ಮೆಕ್ಡರ್ಮಾಟ್, ಆರನ್ ಹಾರ್ಡಿ, ಟಿಮ್ ಡೇವಿಡ್, ಮ್ಯಾಥ್ಯೂ ಶಾರ್ಟ್, ಬೆನ್ ದ್ವಾರ್ಶುಯಿಸ್, ಕ್ರಿಸ್ ಗ್ರೀನ್, ಜೇಸನ್ ಬೆಹ್ರೆನ್ಡಾರ್ಫ್, ತನ್ವೀರ್ ಸಂಘ.
ಎಲ್ಲರೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವುದು ಅವಶ್ಯಕ -ಡಾ.ಈಶ್ವರ ಉಳ್ಳಾಗಡ್ಡಿ
ಕರ್ನಾಟಕದಿಂದ ೪ ವಿದ್ಯಾರ್ಥಿಗಳು ದೆಹಲಿಯ ಸಬ್ ಜೂನಿಯರ್ ವರ್ಗಕ್ಕೆ ಆಯ್ಕೆ
World Cup 2023ಯಲ್ಲಿ ಭಾರತಕ್ಕೆ ಸೋಲು: ಟಿವಿ ಮುಂದೆ ಕುಸಿದು ಬಿದ್ದು ಅಭಿಮಾನಿ ಸಾವು