ಹುಬ್ಬಳ್ಳಿ: ಹನ್ನೊಂದು ವರ್ಷಗಳ ಹಿಂದೆ ನಡೆದ ತ್ರಿವಳಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಯೋಧನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಹುಬ್ಬಳ್ಳಿಯ ಒಂದನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಅಪರಾಧಿ crpf ಯೋಧ ಶಂಕ್ರಪ್ಪ ತಿಪ್ಪಣ್ಣ ಕೊರವರಗೆ ಜೀವಾವಧಿ ಶಿಕ್ಷೆ ಹಾಗೂ 2ಲಕ್ಷದ 20 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ. ಯೋಧ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬೆಟ್ಟದೂರು ಗ್ರಾಮದ ಒಂದೇ ಕುಟುಂಬದ ಮೂವರನ್ನು ಗುಂಡಿಟ್ಟು ಹತ್ಯೆಗೈದಿದ್ದ. ಈ ಪ್ರಕರಣ ಕುರಿತು ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಯೋಧ ಶಂಕ್ರಪ್ಪ 2010 ರಲ್ಲಿ ಮದುವೆಯಾಗಿದ್ದ. ಆದರೆ ಯೋಧ ಹಾಗೂ ಆತನ ಪತ್ನಿ ನಡುವೆ ವಾಗ್ವಾದ ಉಂಟಾಗಿ ಹೆಂಡತಿ ತವರು ಸೇರಿದ್ದಳು. ಯೋಧನ ತಾಯಿಯ ಆಸ್ತಿ ತಮ್ಮ ಹೆಸರಿಗೆ ಬರುವಂತೆ ಮಾಡಲು ಸಂಬಂಧಿಗಳು ಸಹಕರಿಸಲಿಲ್ಲ ಎಂಬ ದ್ವೇಷವಿತ್ತಂತೆ. ಬೆಟ್ಟದೂರು ಗ್ರಾಮದ ಯಲ್ಲಪ್ಪ ಭಜಂತ್ರಿ (38) ಸೋಮಪ್ಪ ಭಜಂತ್ರಿ (11) ಐಶ್ವರ್ಯ ಭಜಂತ್ರಿ (9)ಯನ್ನು ಬಂದೂಕಿನಿಂದ ಗಂಡು ಹಾರಿಸಿ ಹತ್ಯೆಗೈದಿದ್ದ.ಯಲ್ಲಪ್ಪನ ಹೆಂಡತಿ ಗೀತಾ ಗುಂಡೇಟಿನಿಂದ ಪಾರಾಗಿದ್ದಳು. ಈ ಪ್ರಕರಣ ಕುರಿತು ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹುಬ್ಬಳ್ಳಿಯ ಒಂದನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಅಪರಾಧಿ crpf ಯೋಧ ಶಂಕ್ರಪ್ಪ ತಿಪ್ಪಣ್ಣ ಕೊರವರಗೆ ಜೀವಾವಧಿ ಶಿಕ್ಷೆ ಹಾಗೂ 2ಲಕ್ಷದ 20 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ.