Tumukur News:
ಎಣ್ಣೆ ಕುಡಿದು ಟೀಚರ್ ಪಾಠ ಮಾಡಿತ್ತಿದ್ದ ವಿಚಾರ ಇದೀಗ ಬಹಿರಂಗವಾಗಿದೆ. ದುರಭ್ಯಾಸ ಮಾಡಬಾರದು ಎನ್ನುವ ಅಧ್ಯಾಪಕರೇ ಈ ರೀತಿ ಮಾಡಿರೋದು ನಿಜಕ್ಕೂ ಶೋಚನೀಯ ವಿಚಾರ.ತುಮಕೂರು ಜಿಲ್ಲೆಯ ಚಿಕ್ಕಸಾರಂಗಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದೆ. ಗಂಗಲಕ್ಷ್ಮಮ್ಮ ಎಂಬ ಶಿಕ್ಷಕಿಗೆ ಕುಡಿತದ ಚಟ ಇದ್ದಿದ್ದು ಈಗ ಬಹಿರಂಗವಾಗಿದೆ, ನಿತ್ಯ ಮದ್ಯ ಸೇವನೆ ಮಾಡಿಯೇ ಶಾಲೆಗೆ ಬರುತ್ತಿದ್ದ ಗಂಗಮ್ಮಳ ನಾಟಕ ಬಯಲಾಗಿದೆ. ಇಷ್ಟೇ ಅಲ್ಲದೆ ಎಣ್ಣೆ ನಶೆ ಇಳಿದಾಗ ಮತ್ತೇರಲು ತನ್ನ ಡ್ರವರ್ ಒಳಗೂ ಮದ್ಯದ ಬಾಟಲ್ಗಳನ್ನು ಇರಿಸಿಕೊಂಡಿದ್ದಾಳೆ ಈ ಶಿಕ್ಷಕಿ. ಸದಾ ಎಣ್ಣೆ ಏಟಿನಲ್ಲೇ ಇರುತ್ತಿದ್ದ ಗಂಗಲಕ್ಷ್ಮಮ್ಮ, ವಿದ್ಯಾರ್ಥಿಗಳು ಮತ್ತು ಸಹೋದ್ಯೋಗಿಗಳೊಂದಿಗೆ ಕಿರಿಕ್ ಮಾಡಿಕೊಳ್ಳುತ್ತಿದ್ದಳಂತೆ. ಅಷ್ಟೇ ಅಲ್ಲದೆ ಕುಡಿದ ಮತ್ತಿನಲ್ಲಿ ವಿದ್ಯಾರ್ಥಿಗಳಿಗೆ ಹೊಡೆಯುತ್ತಿದ್ದಳು ಎನ್ನಲಾಗಿದೆ.
ಕಳೆದ 20 ವರ್ಷಗಳಿಂದ ಇದೇ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗಂಗಲಕ್ಷ್ಮಮ್ಮಳ ನಿಜ ರೂಪ ಬಯಲಾಗಿದೆ. ಪ್ರತಿನಿತ್ಯ ಜಗಳಕ್ಕೆ ಬೇಸತ್ತಿದ್ದ ಸಹುದ್ಯೋಗಿಗಳು ಇಂದು ಸರಿಹೋಗಬಹುದು, ನಾಳೆ ಬುದ್ಧಿ ಬರಬಹುದು ಎಂದು ಯೋಚಿಸುತ್ತಿದ್ದರು ಆದರೆ ಶಿಕ್ಷಕರೆಲ್ಲರೂ ಆಕೆಗೆ ಜನ್ಮದಲ್ಲಿ ಬುದ್ಧಿ ಬರಲ್ಲ ಎಂದು ಅರಿತು ಬೇರೆ ಕಡೆಗೆ ವರ್ಗಾವಣೆ ಪಡೆದು ಹೋಗುತ್ತಿದ್ದಾರೆ ಎಂದು ಹೇಳಲಾಗಿದೆ.ಪೊಲೀಸರು ಮತ್ತು ಗ್ರಾಮಸ್ಥರು ಶಾಲೆಗೆ ಭೇಟಿಕೊಟ್ಟು ಪರಿಶೀಲನೆ ನಡೆಸಲು ಮುಂದಾದಾಗ ಪೊಲೀಸರ ಕರ್ತವ್ಯಕ್ಕೂ ಆಕೆ ಅಡ್ಡಿಪಡಿಸಿದ್ದಾಳೆ. ಅನಿವಾರ್ಯವಾಗಿ ಗ್ರಾಮಸ್ಥರು ಟೇಬಲ್ ಅನ್ನು ಹೊರತಂದು ಬೀಗ ಒಡೆದು ಡ್ರವರ್ ತೆರೆದಿದ್ದಾರೆ. ಈ ವೇಳೆ ಮದ್ಯದ ಬಾಟಲ್ಗಳು ಪತ್ತೆಯಾಗಿವೆ ಆಕೆಯ ನಿಜ ಬಣ್ಣ ಬಟಾ ಬಯಲಾಗಿದೆ.
ಮದ್ಯದ ಬಾಟಲ್ಗಳು ಪತ್ತೆಯಾಗುತ್ತಿದ್ದಂತೆ ಗಂಗಲಕ್ಷ್ಮಮ್ಮ ಆತ್ಮಹತ್ಯೆಯ ನಾಟಕ ಕೂಡಾ ಆಡಿದ್ದಾಳೆ. ಶಾಲೆ ಕೊಠಡಿ ಬಾಗಿಲು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾಳೆ ಶಿಕ್ಷಕಿ. ನಂತರ ಆಕೆಯನ್ನು ಬಿಇಓ ವಾಹನದಲ್ಲಿ ಕೂರಿಸಿಕೊಂಡು ಕರೆದೊಯ್ಯಲಾಯಿತು ಎನ್ನಲಾಗಿದೆ.
ಸದ್ಯ ಎಣ್ಣೆ ಶಿಕ್ಷಕಿ ಡ್ರವರ್ನಲ್ಲಿ ಪತ್ತೆಯಾದ ಮದ್ಯದ ಬಾಟಲ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಮಹಾಮಳೆಗೆ ತತ್ತರಿಸಿ ಹೋಗಿದ್ದ ಕೊಡಗು ಪ್ರದೇಶ ಗಳನ್ನು ವೀಕ್ಷಿಸಿದ ಕೇಂದ್ರ ಅಧ್ಯಯನ ತಂಡ: