Wednesday, July 2, 2025

Latest Posts

ತುಮಕೂರು: ಕ್ರೂಸರ್ , ಲಾರಿ ನಡುವೆ ಭೀಕರ ಅಪಘಾತ: 9 ಸಾವು 14 ಜನರಿಗೆ ಗಂಭೀರ ಗಾಯ

- Advertisement -

Accident News:

ತುಮಕೂರಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಕೂಲಿ ಕೆಲಸಕ್ಕೆ ಬರುವ ಬಡ ಕಾರ್ಮಿಕರು ಕ್ರೂಸರ್​ಗಳನ್ನೇ ಹೆಚ್ಚಾಗಿ ಅವಲಂಬಿಸುತ್ತಿದ್ದಾರೆ. ಕ್ರೂಸರ್ ನಲ್ಲಿ 12 ಜನರನ್ನು ಮಾತ್ರ ತುಂಬ ಬಹುದು ಆದರೆ ಅದಕ್ಕಿಂತ ಹೆಚ್ಚು ಜನರನ್ನು ತುಂಬಿ ಬರಲಾಗುತ್ತಿದೆ. ಈ ಪರಿಣಾಮ ಅವಘಡಗಳು ಸಂಭವಿಸುತ್ತಿವೆ.ಕಳ್ಳಂಬೆಳ್ಳ ಚೆಕ್​ಪೋಸ್ಟ್ ಹಾಗೂ ಟೋಲ್​ ಬಳಿ ಪದೇಪದೆ ಇಂಥ ಅಪಘಾತಗಳು ಸಂಭವಿಸುತ್ತಿವೆ.

ಕ್ರೂಸರ್ ಗೆ ಲಾರಿ ಡಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿದ್ದು, 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ರಾಯಚೂರು ಜಿಲ್ಲೆಯವರಾಗಿದ್ದು, ಕ್ರೂಸರ್ ನಲ್ಲಿ 20 ಜನರ ಪೈಕಿ 9 ಜನರು ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳ್ಳಂಬೆಳ್ಳ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಚಾಲಕನು ಮದ್ಯಪಾನ ಸೇವಿಸಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಪ್ರಧಾನಿ ಮೋದಿ ಆಗಮನಕ್ಕೆ ಮಂಗಳೂರಿನಲ್ಲಿ ನಡೆಯುತ್ತಿದೆ ಭರದ ಸಿದ್ಧತೆ..!

ಮೃತರಿಗೂ ಸದಸ್ಯಸ್ಥಾನ…! ಸರ್ಕಾರದ ಮಹಾ ಎಡವಟ್ಟು..!

ಗುತ್ತಿಗೆಯೆಲ್ಲಿ 40% ಕಮೀಷನ್ ಆರೋಪ: ಪುರಾವೆಗಳಿದ್ದರೇ ಲೋಕಾಯುಕ್ತಕ್ಕೆ ದೂರು ಸಲ್ಲಿಸಿ – ಸಿಎಂ ಬೊಮ್ಮಾಯಿ

- Advertisement -

Latest Posts

Don't Miss