- Advertisement -
ಸಾವಿರ ಕೋಟಿ ಆಸ್ತಿ ಬಗ್ಗೆ ಬಾಂಬ್ ಸಿಡಿಸಿದ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ
ಬೆಂಗಳೂರು ದಕ್ಷಿಣ ತಾಲ್ಲೂಕು, ಬೇಗೂರು ಹೋಬಳಿಯ ದೇವರಚಿಕ್ಕನಹಳ್ಳಿ ಗ್ರಾಮಕ್ಕೆ ಸೇರಿದಂತೆ ಬಿಟಿಎಂ ಲೇಔಟ್ ಅನ್ನು ಬಿಡಿಎ ನಿರ್ಮಾಣ ಮಾಡಿದೆ.ಈ ಬಡಾವಣೆಯ ವಿವಿಧ ಸರ್ವೆ ನಂಬರ್ಗಳಿಗೆ ಸೇರಿದ ಜಮೀನನ್ನು ಪ್ರಭಾವಿಗಳು ದಾಖಲೆ ಸೃಷ್ಟಿಸಿ ಕಂದಾಯ ನಿವೇಶನಗಳನ್ನಾಗಿ ಪರಿವರ್ತಿಸಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಸುಮಾರು ಒಂದು ಸಾವಿರ ಕೋಟಿ ರೂ. ಬೆಲೆ ಬಾಳುವ 25 ಎಕರೆಯಷ್ಟು ಜಾಗ ಪ್ರಭಾವಿಗಳ ಪಾಲಾಗುತ್ತಿದೆ , ಪಾಲಾಗುತ್ತಿರುವ ಜಮೀನಿನ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಉಮಾಪತಿ ಶ್ರೀನಿವಾಸಗೌಡ ಆರೋಪಿಸಿದ್ದಾರೆ ಹಾಗೂ ಸೂಕ್ತ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.
- Advertisement -