Tuesday, June 3, 2025

Latest Posts

ಬಿಸಿ ಊಟದಲ್ಲಿ ಸಿರಿಧಾನ್ಯ ಪರಿಚಯಿಸುವಂತೆ ಕೇಂದ್ರ ಸರ್ಕಾರ ಒತ್ತಾಯ..!

- Advertisement -

www.karnatakatv.net: ಮಧ್ಯಾಹ್ನದ ಊಟ ಯೋಜನೆಯಲ್ಲಿ ಸಿರಿಧಾನ್ಯ ಪರಿಚಯಿಸುವ ಸಾಧ್ಯತೆಯನ್ನು ಅನ್ವೇಷಿಸಲು ಕೇಂದ್ರ ಸರ್ಕಾರ ರಾಜ್ಯಗಳಲ್ಲಿ ಒತ್ತಾಯಿಸಿದೆ.

ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆಯನ್ನು ನಿವಾರಿಸುವ ಸಲುವಾಗಿ ಮಕ್ಕಳಿಗೆ ಮಧ್ಯಾಹ್ನದ ಊಟದ ಯೋಜನೆಯಲ್ಲಿ ಜೋಳ, ಬಾಜ್ರಾ ಮತ್ತು ರಾಗಿಯನ್ನು ಒಳಗೊಂಡಿರುವ ಸಿರಿಧಾನ್ಯ ಅಥವಾ ಪೋಷಕಾಂಶಯುಕ್ತ ಧಾನ್ಯಗಳು, ಖನಿಜಗಳು ಮತ್ತು ಬಿ-ಕಾಂಪ್ಲೆಕ್ಸ್ ವಿಟಮಿನ್‌ಗಳು, ಹಾಗೆಯೇ ಪ್ರೋಟೀನ್‌ಗಳು ಮತ್ತು ಆಂಟಿ ಆಕ್ಸಿಡಂಟ್ ನಿಂದ ಸಮೃದ್ಧವಾಗಿವೆ. ಇದು ಮಕ್ಕಳ ಪೌಷ್ಟಿಕಾಂಶದ ಫಲಿತಾಂಶವನ್ನು ಸುಧಾರಿಸಲು ಸೂಕ್ತವಾದ ಆಯ್ಕೆಯಾಗಿದೆ. ಅ.28 ರಂದು ತಮ್ಮ ಜಂಟಿ ಪತ್ರದಲ್ಲಿ ಶಾಲಾ ಶಿಕ್ಷಣ ಕಾರ್ಯದರ್ಶಿ ಅನಿತಾ ಕರ್ವಾಲ್ ಮತ್ತು ಕೃಷಿ ಮತ್ತು ರೈತರ ಕಲ್ಯಾಣ ಕಾರ್ಯದರ್ಶಿ ಸಂಜಯ್ ಅಗರ್ವಾಲ್ ಅವರು ಅರಿವು ಮತ್ತು ಲಭ್ಯತೆಯ ಕೊರತೆಯಿಂದಾಗಿ ಸಿರಿಧಾನ್ಯ ಬಳಕೆ ಕಡಿಮೆಯಾಗಿದೆ ಎಂದು ಬರೆದಿದ್ದಾರೆ.

ಇನ್ನು ಇದನ್ನು ಸುಧಾರಿಸಲು ಭಾರತ ಸರ್ಕಾರವು ಹಲವಾರು ಉಪಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ಪ್ರಕಾರ, ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ 38 ಪ್ರತಿಶತ ಮಕ್ಕಳ ಬೆಳವಣಿಗೆ ಕುಂಠಿತವಾಗಿದೆ ಮತ್ತು 59 ಪ್ರತಿಶತ ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಇದು ಗಂಭೀರ ಸಂಗತಿ. ಅಪೌಷ್ಟಿಕತೆ ಮತ್ತು ರಕ್ತಹೀನತೆಯನ್ನು ಕಡಿಮೆ ಮಾಡಲು ಉಪಕ್ರಮಗಳ ಸರಣಿಗಳಲ್ಲಿ ಭಾರತ ಸರ್ಕಾರವು ಸಿರಿಧಾನ್ಯ ಸೇವನೆಗೆ ಒತ್ತು ನೀಡುತ್ತಿದೆ ಎಂದು ಅವರು ಹೇಳಿದರು. “ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿಯಲ್ಲಿ ಸಿರಿಧಾನ್ಯವನ್ನು ಪರಿಚಯಿಸುವ ಸಾಧ್ಯತೆಗಳನ್ನು ಅನ್ವೇಷಿಸಲು ನಿಮ್ಮನ್ನು ವಿನಂತಿಸಲಾಗಿದೆ, ಮೇಲಾಗಿ ಸಿರಿಧಾನ್ಯ ತಿನ್ನುವುದು ಸಾಂಸ್ಕೃತಿಕವಾಗಿ ಅಂಗೀಕರಿಸಲ್ಪಟ್ಟ ಆಹಾರ ಪದ್ಧತಿಯಾಗಿರುವ ಜಿಲ್ಲೆಗಳಲ್ಲಿ ನೀವು ವಾರದಲ್ಲೊಂದು ದಿನ ಸಿರಿಧಾನ್ಯ ಆಧಾರಿತ ಮೆನುವನ್ನು ಪರಿಚಯಿಸಬಹುದು.” ಎಂದು ಕೇಂದ್ರ ಹೇಳಿದೆ.

- Advertisement -

Latest Posts

Don't Miss