Sunday, September 8, 2024

Latest Posts

ನೀತಿ ಸಂಹಿತೆ ಉಲ್ಲಂಘಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…!

- Advertisement -

www.karnatakatv.net :ಹುಬ್ಬಳ್ಳಿ- ಒಂದ್ಕಡೆ ಹುಬ್ಬಳ್ಳಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಮತ್ತೊಂದೆಡೆ ಇವತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿಯ ವಿವಾಹ ನಡೀತಿದ್ದು ಸಮಾರಂಭಕ್ಕೆ ಗಣ್ಯಾತಿಗಣ್ಯರು ಸೇರಿದಂತೆ ಇತರೆ ಜಿಲ್ಲೆಗಳಿಂದ ಜನರು ಆಗಮಿಸ್ತಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗ್ತಿದೆ.

ಹೌದು, ಹುಬ್ಬಳ್ಳಿ ನಗರದಲ್ಲಿ ಇವತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿ ವಿವಾಹ ಅದ್ದೂರಿಯಾಗಿ ನೆರವೇರಿತು. ಖಾಸಗಿ ಹೋಟೆಲ್ ನಲ್ಲಿ ನಡೆದ ಈ ಸಮಾರಂಭಕ್ಕೆ ಬಿಜೆಪಿಯ ಗಣ್ಯಾತಿಗಣ್ಯರು ಆಗಮಿಸಿದ್ರು. ಅಲ್ಲದೆ ಹೊರರಾಜ್ಯಗಳಿಂದಲೂ ಅತಿಥಿಗಳು ಆಗಮಿಸಿರೋದ್ರಿಂದ ಇಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ. ಇನ್ನು ನಾಳೆ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ವಾರ್ಡ್ ನ ಮತದಾರರಲ್ಲದವರು ಕ್ಷೇತ್ರದಿಂದ ಹೊರ ಹೋಗಬೇಕು ಅಂತ ಚುನಾವಣಾ ಆಯೋಗ ಸೂಚನೆ ನೀಡಿತ್ತು. ಇನ್ನು ಇದನ್ನೆಲಾ ಅಧಿಕಾರಿಗಳು ನೋಡ್ತಿದ್ದಾರೋ ಅಥವಾ  ಕಣ್ಣು ಮುಚ್ಚಿ ಕುಳಿತ್ತಿದ್ದಾರೋ ಅನ್ನೋದು ಸಾರ್ವಜನಿಕ ವಲಯದಲ್ಲಿ ಮೂಡಿರೋ ಪ್ರಶ್ನೆಯಾಗಿದೆ.

ಕರ್ನಾಟಕ ಟಿವಿ- ಹುಬ್ಬಳ್ಳಿ

- Advertisement -

Latest Posts

Don't Miss