Sunday, May 19, 2024

Latest Posts

ದಿಂಗಾಲೇಶ್ವರ ಶ್ರೀಗಳು ಪಕ್ಷೇತರವಾಗಿ ಸ್ಪರ್ಧಿಸುವ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಿಷ್ಟು..

- Advertisement -

Hubli News: ಹುಬ್ಬಳ್ಳಿ: ದಿಂಗಾಲೇಶ್ವರ ಶ್ರೀಗಳು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿಯಲ್ಲಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ, ದಿಂಗಾಲೇಶ್ವರ ಶ್ರೀಗಳ ಸ್ಪರ್ಧೆ ಬಗ್ಗೆ ನಾನು ಏನೂ ಹೇಳುವುದಿಲ್ಲ. ಮೋದಿ ಅಧಿಕಾರಕ್ಕೆ ಬರುವ ಮೊದಲು ದೇಶ ಹೇಗಿತ್ತು ಈಗ ದೇಶ ಹೇಗಿದೆ ? ಇದು ಜಾತಿ ಆಧಾರಿತ ಚುನಾವಣೆ ಅಲ್ಲ. ಇದು ರಾಷ್ಟ್ರೀಯ ವಿಷಯ ಮತ್ತು ಸವಾಲುಗಳ ಮೇಲಿನ ಚುನಾವಣೆ. ದೇಶಕ್ಕೆ ನರೇಂದ್ರ ಮೋದಿ ಬೇಕೋ ಇಂಡಿ ಅಲೈಯನ್ಸ್ ಬೇಕೋ ಎನ್ನುವ ಕುರಿತು ಈ ಚುನಾವಣೆ ನಡೆಯಲಿದೆ ಎಂದಿದ್ದಾರೆ.

ರಾಷ್ಟ್ರೀಯ ಪಕ್ಷಗಳ ಒಳ ಒಪ್ಪಂದ ಕುರಿತು ದಿಂಗಾಲೇಶ್ವರ ಶ್ರೀಗಳ ಆರೋಪ ವಿಚಾರದ ಬಗ್ಗೆ ಮಾತನಾಡಿರುವ ಜೋಶಿ, ಶ್ರೀಗಳ ಆರೋಪಕ್ಕೆ ಪಕ್ಷದ ವಕ್ತಾರರು ಉತ್ತರ ನೀಡುತ್ತಾರೆ. ದಿಂಗಾಲೇಶ್ವರ ಶ್ರೀಗಳು ಏನೇ ಆರೋಪ ಮಾಡಿದರೂ ಅದು‌ ಅವರ ಆರ್ಶೀವಾದ ಇದ್ದಂತೆ. ಅವರ ಸ್ಪರ್ಧೆ ಬಗ್ಗೆ ನಾನು ಹೆಚ್ಚಿಗೆ ಏನೂ ಮಾತನಾಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ: ಗುಂಡೂರಾವ್ ಪತ್ನಿ ತಬ್ಬು

ಲೋಕಸಭೆ ಚುನಾವಣೆ 2024: ಧಾರವಾಡ ಲೋಕಸಭಾ ಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ

ಕನ್ನಡ ಮಾಧ್ಯಮ ಲೋಕದಲ್ಲಿ ಹೊಸ ಸಂಚಲನ.. “ಗ್ಯಾರಂಟಿ ನ್ಯೂಸ್”..!

- Advertisement -

Latest Posts

Don't Miss