Friday, May 17, 2024

Latest Posts

ಮಹದಾಯಿ ವಿಳಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾರಣ: ವೀರೇಶ ಸೊರಬದಮಠ ಗಂಭೀರ ಆರೋಪ

- Advertisement -

Hubballi News: ಹುಬ್ಬಳ್ಳಿ: ಮಹದಾಯಿ ವಿಳಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾರಣ ಎಂದು  ಮಹದಾಯಿ ಹೋರಾಟಗಾರ ವೀರೇಶ ಸೊರಬದಮಠ ಗಂಭೀರ ಆರೋಪ ಮಾಡಿದ್ದಾರೆ.

ಮಹದಾಯಿ ಹೋರಾಟ ಏಳು ವರ್ಷ ಪೂರೈಸಿ ಎಂಟು ವರ್ಷಕ್ಕೆ ಕಾಲಿಟ್ಟಿದೆ. ಆದ್ರೂ ಕೂಡ ಮಹದಾಯಿ ಕನಸು ಕನಸಾಗಿಯೇ ಉಳಿದಿದೆ. ಈ ವಿಳಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರೇ ಕಾರಣ. ಪ್ರತಿಯೊಂದು ಸರ್ಕಾರವೂ ಕೂಡ ಹಾರಿಕೆ ಉತ್ತರವನ್ನು ನೀಡುವ ಮೂಲಕ ತಮ್ಮ ರಾಜಕೀಯ ಬೆಳೆಯನ್ನು ಬೇಯಿಸಿಕೊಳ್ಳುವ ಕೆಲಸವನ್ನು ಮಾಡುತ್ತಿವೆ ಎಂದು ಸೊರಬದಮಠ ಆರೋಪಿಸಿದರು.

ಈ ಭಾಗದ ಬಹು ನಿರೀಕ್ಷಿತ ಯೋಜನೆ ಕಳಸಾ ಬಂಡೂರಿ ಮಹದಾಯಿ ಯೋಜನೆ. ಈ ಯೋಜನೆ ವಿಳಂಬವಾಗಲು ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರೇ ನೇರವಾದ ಹೊಣೆಗಾರರಾಗಿದ್ದಾರೆ. ಇನ್ನೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾಕಷ್ಟು ಭರವಸೆ ಕೊಟ್ಟಿದ್ದರು. ಆದ್ರೆ ಯಾವುದೇ ರೀತಿಯಲ್ಲಿ ಭರವಸೆ ಈಡೇರಿಸದೇ ನೆಪ ಮಾತ್ರಕ್ಕೆ ಮಹದಾಯಿ ಬಗ್ಗೆ ಚಿಂತನೆ ನಡೆಸಿ ಕೈತೊಳೆದುಕೊಂಡಿರುವುದು ವಿಪರ್ಯಾಸಕರ ಸಂಗತಿ. ಇನ್ನೂ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ಮಹದಾಯಿ ಬಗ್ಗೆ ಇನ್ನೂ ಕೆಲವು ದಿನಗಳಲ್ಲಿ ಕಿರು ಹೊತ್ತಿಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಸೊರಬದಮಠ ಹೇಳಿದ್ದಾರೆ.

ಅನಧಿಕೃತ ಜೀಪ್ ರೇಸ್‌ಗೆ ಬ್ರೇಕ್ ಹಾಕಿದ RFO: 20 ಮಂದಿ ವಿರುದ್ಧ ಕೇಸ್ ದಾಖಲು

ಪ್ರೇಕ್ಷಕರ ಮಂತ್ರಮುಗ್ದಗೊಳಿಸಿದ ಸವಿತಕ್ಕಾರ ಉಧೋ ಉಧೋ ಎಲ್ಲವ್ವ : ಡಾ. ಮಂಜಮ್ಮ ಜೀವನಗಾಥೆಯ ಏಕಪಾತ್ರಾಭಿನಯ

ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು..?

- Advertisement -

Latest Posts

Don't Miss