ಕೌಶಾಂಬಿ : ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ನಡೆದ ಕೌಶಾಂಬಿ ಮಹೋತ್ಸವವನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಉದ್ಘಾಟಿಸಿದ್ದಾರೆ. ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಉಪಸ್ಥಿತರಿದ್ದು, ಮೋದಿ ಕಾರ್ಯಗಳನ್ನ ಶ್ಲಾಘಿಸಿದ್ದಾರೆ.
ಭಾರತದಲ್ಲಿ ಕಳೆದ 3 ವರ್ಷಗಳಿಂದ, 80 ಕೋಟಿ ಜನರಿಗೆ ಉಚಿತವಾಗಿ ರೇಷನ್ ನೀಡಲಾಗುತ್ತಿದೆ. ಆದರೆ ಪಾಕಿಸ್ತಾನದಲ್ಲಿ ಜನ ಆಹಾರಕ್ಕಾಗಿ ಪರದಾಡುತ್ತಿದ್ದಾರೆ. ಭಾರತ ವಿಶ್ವಗುರುವಾಗುತ್ತಿದೆ. ಪ್ರಧಾನಿ ಮೋದಿ ನಾಯಕತ್ವದಲ್ಲಿ ಭಾರತ ಅಭಿವೃದ್ಧಿ ಸಾಧಿಸುತ್ತಿದ್ದು, ಇಡೀ ಜಗತ್ತೇ ಭಾರತ ದೇಶದತ್ತ ತಿರುಗಿ ನೋಡುವಂತೆ ಮಾಡುತ್ತಿದೆ ಎಂದು ಹೇಳಿದ್ದಾರೆ.
ಇನ್ನು ಇದೇ ವೇಳೆ ಕೌಶಾಂಬಿಯಲ್ಲಿ ಹಲವು ಕಾರ್ಯಕ್ರಮಗಳನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಶಂಕುಸ್ಥಾಪನೆ ಮಾಡಿದರು. ಈ ಬಗ್ಗೆ ಮಾತನಾಡಿದ ಯೋಗಿ ಆದಿತ್ಯನಾಥ್, ‘ಇಂದು ರಾಷ್ಟ್ರಾಧ್ಯಕ್ಷರು 612 ಕೋಟಿ ವೆಚ್ಚದ ಕಾರ್ಯಕ್ರಮಗಳನ್ನ ಶಂಕುಸ್ಥಾಪನೆ ಮಾಡಿದ್ದಾರೆ. ಕೌಶಂಬಿ ಬಹಳ ಐತಿಹಾಸಿಕ ಸಂಬಂಧಗಳನ್ನು ಹೊಂದಿದ್ದು, ಶ್ರೀರಾಮ ಕೂಡ ಈ ಸ್ಥಳದಲ್ಲಿ ಒಂದು ರಾತ್ರಿ ಉಳಿದು ಹೋಗಿದ್ದನಂತೆ’ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
कौशाम्बी में मा. केंद्रीय गृह एवं सहकारिता मंत्री श्री @AmitShah जी के साथ कौशाम्बी महोत्सव-2023 के शुभारंभ के साथ 117 विकास परियोजनाओं के लोकार्पण/शिलान्यास और सांसद खेल स्पर्धा के विजेता खिलाड़ियों के सम्मान हेतु आयोजित कार्यक्रम में… https://t.co/PhdAotSWW5
— Yogi Adityanath (@myogiadityanath) April 7, 2023
ನಾನು ಕೋಲಾರದವನೇ, ಪಾಕಿಸ್ತಾನದಿಂದ ಬಂದವನಲ್ಲ: ಗೋ ಬ್ಯಾಕ್ ಕ್ಯಾಂಪೇನರ್ಸ್ಗೆ ನಾಯ್ಕರ್ ಟಾಂಗ್..
‘ನೆಹರೂ ಕುಟುಂಬದ ರಾಹುಲ್ ಗಾಂಧಿಗೆ ಬಿಜೆಪಿಯವರು ತೊಂದರೆ ಕೊಡ್ತಿದ್ದಾರೆ’
‘ಈ ಬಾರಿ ಮಾಲೂರಿನಲ್ಲಿ ಕಾಂಗ್ರೆಸ್ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸುತ್ತೆ’