Saturday, May 24, 2025

Latest Posts

ಶಾಲಾ-ಕಾಲೇಜು ಆರಂಭದ ಕುರಿತು ಮಹತ್ವದ ಮಾಹಿತಿ

- Advertisement -

www.karnatakatv.net- ರಾಜ್ಯ- ರಾಜ್ಯದಲ್ಲಿ 3ನೇ ಅಲೆ ಆತಂಕ ಶುರುವಾಗಿದ್ದು, ಇದಕ್ಕಾಗಿ ಯಾವೆಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಡಾ.ದೇವಿ ಶೆಟ್ಟಿ ನೇತೃತ್ವದ ಸಮಿತಿ ಸರ್ಕಾರಕ್ಕೆ 92 ಪುಟಗಳ ಸುದೀರ್ಘ ವರದಿ ಸಲ್ಲಿಸಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ ಉನ್ನತ ಶಿಕ್ಷಣ ಆರಂಭಕ್ಕೆ ಚಿಂತನೆ ನಡೆಸಲಿದ್ದೇವೆ, ಪ್ರತೀ ಜಿಲ್ಲೆಯಲ್ಲೂ ಮಕ್ಕಳ ಆಸ್ಪತ್ರೆ ಹಾಗೂ ಐಸಿಯುಗಳ ಸ್ಥಾಪನೆಗೆ ಸಮಿತಿ ಸಲಹೆ ನೀಡಿದೆ ಎಂದ್ರು. ಇದೇ ವೇಳೆ ರಾಜ್ಯದಲ್ಲಿ ಶಾಲಾ-ಕಾಲೇಜು ಪುನಾರಂಭದ ವಿಚಾರವಾಗಿ ಮಾತನಾಡಿದ ಬಿಎಸ್ ವೈ ಅಪೌಷ್ಠಿಕತೆ, ಬಾಲಕಾರ್ಮಿಕ ಪದ್ಧತಿ. ಮಕ್ಕಳ ಭಿಕ್ಷಾಟನೆಯಂತಹ ಸಮಸ್ಯೆ ನಿವಾರಣೆಗಾಗಿ ಶಾಲೆಗಳನ್ನು ತೆರೆಯುವುದು ಒಳ್ಳೇದು ಎಂದು ಸಮಿತಿ ಹೇಳಿದೆ. ಮೊದಲು ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳನ್ನ ಆರಂಭಿಸಬೇಕು. ಇದಕ್ಕೂ ಮುನ್ನ ಎಲ್ಲಾ ವಿದ್ಯಾರ್ಥಿಗಳಿಗೆ ಲಸಿಕೆ ಪೂರೈಸುವ ವ್ಯವಸ್ಥೆ ಮಾಡಲಾಗುವುದು ಎಂದ್ರು.

- Advertisement -

Latest Posts

Don't Miss