Sunday, September 8, 2024

Latest Posts

ಕನ್ನಡ ರಾಜ್ಯೋತ್ಸವದ ದಿನ ಅನ್ನದಾನ ವಿಚಾರವಾಗಿ ಗಲಾಟೆ: ಪುರಸಭೆ ಸದಸ್ಯನ ಮೇಲೆ ಹಲ್ಲೆ

- Advertisement -

Mysuru News: ಮೈಸೂರು : ಹುಣಸೂರಿನಲ್ಲಿ ಕನ್ನಡ ರಾಜ್ಯೋತ್ಸವದ ದಿನ ಅನ್ನದಾನ ಮಾಡುವ ವಿಚಾರಗಿ ಗಲಾಟೆ ನಡೆದಿದ್ದು, ಪುರಸಭೆ ಸದಸ್ಯ ಮಂಜು ಎಂಬುವರ ಮೇಲೆ ಹಲ್ಲೆ ಮಾಡಲಾಗಿದೆ. ಪ್ರಕರಣ ಸಂಬಂಧ ಮೂವರ ವಿರುದ್ಧ ಎಫ್ಐಅರ್ (FIR) ದಾಖಲಾಗಿದೆ. ಗಾಯಗೊಂಡ ಪುರಸಭೆ ಸದಸ್ಯ ಮಂಜು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ಕಾರು ಸ್ಟ್ಯಾಂಡ್ ಸಂಘಟನೆಯ ಅಧ್ಯಕ್ಷ ದೇವರಾಜ್, ಇವರ ಪುತ್ರರಾದ ರಾಕೇಶ್, ಶರತ್ ಮೇಲೆ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡ ರಾಜ್ಯೋತ್ಸವ ದಿನ ಕಾರ್ ಸ್ಟ್ಯಾಂಡ್ ಸಂಘಟನೆಯಿಂದ ಸಾರ್ವಜನಿಕರಿಗೆ ಅನ್ನದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಘಟನೆ ಉಪಾಧ್ಯಕ್ಷ ಮಂಜು ಅವರ ನೇತೃತ್ವದಲ್ಲಿ ಅನ್ನದಾನ ಕಾರ್ಯಕ್ರಮಕ್ಕೆ ಸಿದ್ದತೆ ನಡೆಯುತ್ತಿತ್ತು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಅಧ್ಯಕ್ಷ ದೇವರಾಜ್ ಅನ್ನದಾನ ವಿಚಾರದಲ್ಲಿ ಕಿರಿಕ್ ತೆಗೆದಿದ್ದಾರೆ. ಇದು ಜಾತಿ ವಿಚಾರಕ್ಕೆ ತಿರುಗಿದೆ.

ಗಲಾಟೆ ಹೆಚ್ಚಾಗಿ ದೇವರಾಜ್, ಮಕ್ಕಳಾದ ರಾಕೇಶ್ ಮತ್ತು ಶರತ್‌, ಮಂಜು ಅವರಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಇದರಿಂದ ಗಾಯಗೊಂಡ ಮಂಜು ಅವರನ್ನು ಸ್ಥಳದಲ್ಲಿದ್ದ ಕೆಲವು ಜನ ಹುಣಸೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ದೇವರಾಜ್, ರಾಕೇಶ್, ಶರತ್ ವಿರುದ್ಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸರ್ಕಾರಿ ಶಾಲೆಯ ಮಕ್ಕಳ ಅಭಿವೃದ್ಧಿಯತ್ತ ಚಿತ್ತ‌ಹರಿಸಿದ ಕಾಂಗ್ರೆಸ ‌ಶಾಸಕ

‘ಅವರಲ್ಲಿ ಹೊಂದಾಣಿಕೆ ಇಲ್ಲ ಅನ್ನೋದು ಗೊತ್ತಾಗ್ತಿದೆ. ಬೆಳಗ್ಗೆ ಎದ್ರೆ ನಾಯಿ, ನರಿ ತರ ಕಿತ್ತಾಡ್ತಿದ್ದಾರೆ’

‘ಆ ನಾಲ್ಕು ಜನರ ನಡುವೆ ಜಗಳ ಹಚ್ಚಿ, ಸಿದ್ದರಾಮಯ್ಯ ಸಿಎಂ ಆಗಿರಬೇಕು ಅಂದುಕೊಂಡಿದ್ದಾರೆ’

- Advertisement -

Latest Posts

Don't Miss