Friday, October 18, 2024

Latest Posts

ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕ

- Advertisement -

ಬೆಂಗಳೂರು: ಇದೇ ತಿಂಗಳ ಮೇ.31ಕ್ಕೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿರುವಂತ ಪಿ.ರವಿಕುಮಾರ್ ಅವರ ಅವಧಿ ಮುಕ್ತಾಯಗೊಳ್ಳುತ್ತಿತ್ತು. ಈ ಹಿನ್ನಲೆಯಲ್ಲಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 1986ನೇ ಸಾಲಿನ ಕರ್ನಾಟಕ ಕೇಡರ್ ನ ಐಎಎಸ್ ಅಧಿಕಾರಿ ವಂದಿತಾ ಶರ್ಮಾ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಮೊದಲು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಡೆಲಪ್ ಮೆಂಟ್ ಕಮೀಷನರ್ ಆಗಿ ಕೆಲಸ ಮಾಡುತ್ತಿದ್ದರು.

ಅಂದಹಾಗೇ ದಿನಾಂಕ 31-05-2022ರಂದು ಹಾಲಿ ಸಿಎಂ ಪಿ.ರವಿಕುಮಾರ್ ಅವರು ನಿವೃತ್ತರಾಗಲಿದ್ದಾರೆ. ಇವರ ಸ್ಥಾನಕ್ಕೆ ಹಲವರ ಹೆಸರು ಕೇಳಿ ಬಂದಿತ್ತು. ಆದ್ರೇ ಅಂತಿಮವಾಗಿ ರಾಜ್ಯ ಸರ್ಕಾರ ವಂದಿತಾ ಶರ್ಮಾ ಅವರನ್ನು ನೇಮಿಸಿದೆ.

- Advertisement -

Latest Posts

Don't Miss