Sunday, September 8, 2024

Latest Posts

ಆಂಜನೇಯನ ಸನ್ನಿಧಿಯಲ್ಲಿ “ವರ್ಣಂ” ಮುಹೂರ್ತ ಶುರು

- Advertisement -

ಇದು ಹೊಸತಂಡದ ಹೊಸ ಪ್ರಯತ್ನವಾಗಿದೆ. ಕನ್ನಡ ಚಿತ್ರರಂಗವನ್ನು ಇಡೀ ವಿಶ್ವವೇ ತಿರುಗಿ ನೋಡುತ್ತಿರುವ ಈ  ಸಮಯದಲ್ಲಿ ವಿಭಿನ್ನ ಕಥೆಯುಳ್ಳ ಅನೇಕ ನೂತನ ಚಿತ್ರಗಳು ಆರಂಭವಾಗುತ್ತಿದೆ. ಅಂತಹುದೇ ಒಂದು ವಿಭಿನ್ನ ಕಥಾಹಂದರ ಹೊಂದಿರುವ “ವರ್ಣಂ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ತುಮಕೂರಿನ ಶೆಟ್ಟಿಹಳ್ಳಿ ಶ್ತೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಆರಂಭವಾಯಿತು. ಶ್ರೀಮತಿ ಸೌಭಾಗ್ಯಮ್ಮ(ನಿರ್ಮಾಪಕರ ತಾಯಿ) ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.

ಅಡವಿ ಶೇಷ್ ‘ಹಿಟ್ -2’ ಸಿನಿಮಾ ಡಿಸೆಂಬರ್ 2ಕ್ಕೆ ಬಿಡುಗಡೆ

ಏಂಜಲ್ ಫಿಲಂಸ್ ಲಾಂಛನದಲ್ಲಿ ಆರ್ ಜಗದೀಶ್ ಬಾಬು ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಅರುಣ್ ರಾಜ ನಿರ್ದೇಶಿಸುತ್ತಿದ್ದಾರೆ. ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಕಥೆ ಚೈತ್ರಾ ಅನಂತಾಡಿ ಅವರದು. ಚಿತ್ರಕಥೆಯನ್ನು ಮಂಜುನಥ್ ಕೋಟೆಕೆರೆ ಬರೆದಿದ್ದಾರೆ. ಪ್ರದೀಪ್ ವಿ ಬಂಗಾರಪೇಟೆ ಛಾಯಾಗ್ರಹಣ,  ಕೀರ್ತಿರಾಜ್ ಹಿನ್ನೆಲೆ ಸಂಗೀತ ಹಾಗೂ ಅಲ್ಟಿಮೇಟ್ ಶಿವು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ‌. ಪವನ್ ಎನ್. ಹಾಗೂ ಲೋಕೇಶ್ ಡಿ ಎಮ್ ಪಟಿಲ್ ಈ ಚಿತ್ರದ ಸಹ ನಿರ್ಮಾಪಕರು.

2022 ಮುಗಿಯುವ ಮೊದಲು ಈ 5 ವಸ್ತುಗಳನ್ನು ಮನೆಗೆ ತನ್ನಿ..!!

ಮನು ಈ ಚಿತ್ರದ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಮೇಘನ “ವರ್ಣಂ” ಚಿತ್ರದ ನಾಯಕಿ. ಎಂ.ಕೆ.ಮಠ, ರಿತಿಕ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಎರಡು ಮೈನವಿರೇಳಿಸುವ ಸಾಹಸ ಸನ್ನಿವೇಶಗಳು ಹಾಗೂ ಎರಡು ಇಂಪಾದ ಹಾಡುಗಳು “ವರ್ಣಂ” ಚಿತ್ರದಲ್ಲಿದೆ. ಡಿಸೆಂಬರ್ 8 ರಿಂದ ತುಮಕೂರು, ಹೊನ್ನಾವರ ಹಾಗೂ ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ.

ಹೊಸ ವರ್ಷದ ಮೊದಲ ದಿನ ಹೀಗೆ ಮಾಡಿದರೆ..ಇಡೀ ವರ್ಷ ಹಣದ ಸುರಿಮಳೆ…!

ಏಡ್ಸ್ ತಡೆಯಲು ಜಾಗೃತಿ ಅಗತ್ಯ: ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್

- Advertisement -

Latest Posts

Don't Miss