ಬೆಂಗಳೂರು: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್(64) ನಿಧನರಾಗಿದ್ದಾರೆ. ಮಂಗಳವಾರ ಹೃದಾಯಾಘಾತದಿಂದ ವಿಕ್ರಮ್ ಅವರು ಕುಸಿದು ಬಿದ್ದರು ತಕ್ಷಣ ಮಣಿಪಾಲ್ ಖಾಸಗಿ ಆಸ್ಪತ್ರೆಗೆ ದಾಖಲಿಸಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ತಡರಾತ್ರಿ ಕೊನೆಯುಸಿರೆಳಿದಿದ್ದಾರೆ. ಬೆಂಗಳೂರಿನ ಹೆಬ್ಬಾಳದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
‘ಉಗ್ರಗಾಮಿ-ನಾಲಾಯಕ್ ಪದ ಬಳಕೆ ವಾಪಸ್ ಪಡೆಯಲಿ..’
ವಾಹನ ಉದ್ಯಮದಲ್ಲಿ ಹೆಸರು ಮಾಡಿದ್ದ ವಿಕ್ರಮ್ ಅವರ ನಿಧನದ ಕುರಿತು ಟೊಯೋಟಾ ಇಂಡಿಯಾ ಸಾಮಾಜಿಕ ಮಾಧ್ಯದಲ್ಲಿ ದೃಢಪಡಿಸಿದೆ. ಈ ಸುದ್ದಿಯನ್ನು ತಿಳಿಸಲು ತುಂಬಾ ದುಃಖಿತರಾಗಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ನಾವೆಲ್ಲರೂ ಪ್ರಾರ್ಥಿಸುತ್ತೇವೆ. ಅವರ ಕುಟುಂಬದವರಿಗೆ ಮತ್ತ ಸ್ನೇಹಿತರಿಗೆ ದುಃಖವನ್ನು ಭರಿಸುವ ಶಕ್ತಿ ಕೊಡಲೆಂದು ಕೇಳಿಕೊಳ್ಳುತ್ತೇವೆ. ನ. 30 ರಂದು ಮಧ್ಯಾಹ್ನ ಬೆಂಗಳೂರಿನ ಹೆಬ್ಬಾಳ ಸ್ವಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
‘ರೈಲಿಗೆ ಸಿಲುಕಿ ಕಾಡಾನೆಗಳು ಅಪಘಾತವಾಗುತ್ತಿರುವುದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ’