Saturday, July 27, 2024

Latest Posts

ಗ್ರಾಮ ಪಂಚಾಯತಿಗೆ ಬೀಗ ಜಡಿದು, ಪ್ರತಿಭಟನೆ ಮಾಡಿದ ಶಿರಗುಪ್ಪಿ ಗ್ರಾಮಸ್ಥರು

- Advertisement -

Hubli News: ಹುಬ್ಬಳ್ಳಿ: ರೈತರ ಹೊಲಗಳಿಗೆ ತೆರಳಲು ಸರಿಯಾದ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮಸ್ಥರು ಗ್ರಾಮ ಪಂಚಾಯತಿಗೆ ಬೀಗ್ ಜಡಿದು, ಪ್ರತಿಭಟನೆ ಮಾಡಿದರು.

ಹೌದು, ಶಿರಗುಪ್ಪಿ ಗ್ರಾಮದ ರೈತರು ಕಳೆದ ನೂರಾರು ವರ್ಷಗಳಿಂದ ಉಮಚಗಿ ಹಾಗೂ ಕೋಳಿವಾಡ ರಸ್ತೆಯಲ್ಲಿನ ಹೊಲಗಳಲ್ಲಿ ಕೃಷಿ ಚಟುವಟಿಕೆ ನಡೆಸುತ್ತಾ ಬಂದಿದ್ದಾರೆ.

ಇದೀಗ ಮುಂಗಾರು ಆಗಮನ ನಿರೀಕ್ಷೆಯಲ್ಲಿರುವ ರೈತರು ತಮ್ಮ ಹೊಲಗಳನ್ನು ಹದಮಾಡಿ ಇಡುವ ಕೆಲಸ ಮಾಡುತ್ತಿದ್ದಾರೆ. ಆದರೆ ಇದೀಗ ಕೆಲವು ರೈತರು ಇನ್ನುಳಿದ ರೈತರಿಗೆ ತಮ್ಮ ಹೊಲದಲ್ಲಿ ಓಡಾಡಲು ಅವಕಾಶ ನೀಡದ ಕಾರಣ ನೂರಾರು ರೈತರು ಹೊಲಕ್ಕೆ ಸರಿಯಾದ ರಸ್ತೆ ನಿರ್ಮಿಸಿ ಕೊಡುವಂತೆ ಶಿರಗುಪ್ಪಿ ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಿ, ಅಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ಈ ಸಮಸ್ಯೆ ಕುರಿತಾಗಿ ಗ್ರಾಮದ ರೈತರು ಜಮೀನಿನ ರೈತರೊಂದಿಗೆ ಮಾತುಕತೆ ನಡೆಸಿ, ಓಡಾಡಲು ಅವಕಾಶ ಕಲ್ಪಿಸುವಂತೆ ತಿಳಿಸಿದ್ದಾರೆ. ಅದಾಗ್ಯೂ ಕೂಡಾ ಯಾವುದೇ ಪ್ರಯೋಜನ ಆಗದ ಕಾರಣ ತಹಶಿಲ್ದಾರ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಸಮಸ್ಯೆ ಪರಿಹರಿಸಲು ತಿಳಿಸಿದ್ದಾರೆ. ಆದರೆ ಈವರೆಗೆ ಕೂಡಾ ಯಾವುದೇ ಪ್ರಯೋಜನವಾಗಿವಂತೆ. ಹೀಗಾಗಿ ಅಧಿಕಾರಿಗಳು ತಮ್ಮ ಸಮಸ್ಯೆಯನ್ನು ಶೀಘ್ರ ಪರಿಹರಿಸಬೇಕು. ಇಲ್ಲವಾದರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸದ್ದಾಂ ಎಂಬುವವನಿಂದ ಅಪ್ರಾಪ್ತೆ ಗರ್ಭಿಣಿ ಕೇಸ್ – ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

ಲವ್ ಜಿಹಾದ್ ಜಾಲ ವ್ಯಾಪಕವಾಗಿದೆ, ದೊಡ್ಡಮಟ್ಟದ ತನಿಖೆಯಾಗಬೇಕು: ಸಿ.ಟಿ.ರವಿ..!

ಕಾಂಗ್ರೆಸ್ ತುಷ್ಟಿಕರಣ ರಾಜಕಾರಣದಿಂದ ಎಲ್ಲೆಡೆಯೂ ಕೊ*ಲೆ, ಲವ್ ಜಿಹಾದ್ ನಡೆಯುತ್ತಿದೆ: ವಿಜಯೇಂದ್ರ..!

- Advertisement -

Latest Posts

Don't Miss