Hubli News: 2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತ ಏಣಿಕೆ ಜೂನ್ 4 ರಂದು ನಡೆಯಲಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಈಗಾಗಲೇ ಏರಿಳಿತಗಳು ಜೋರಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದ ಇಬ್ಬರು ಅಭ್ಯರ್ಥಿಗಳು ಮನೆಯಲ್ಲಿಯೇ ಗೆಲ್ಲುವಿನ ಲೆಕ್ಕಾಚರದಲ್ಲಿ ಬ್ಯೂಸಿಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರ ಅಭಿಮಾನಿಯೊಬ್ಬ ದೇವರ ಮೊರೆ ಹೊಗಿರುವ ವಿಡಿಯೋ ಈಗ ವೈರಲಾಗಿದೆ.
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಸ್ಪರ್ಧೆ ಮಾಡಿದ್ದು, ಎರಡು ಪಕ್ಷದ ಅಭಿಮಾನಿಗಳು ಸೇರಿದಂತೆ ಕಾರ್ಯಕರ್ತರು ಒಂದೊಂದು ರೀತಿಯಲ್ಲಿ ತಮ್ಮ ಅಭ್ಯರ್ಥಿಗಳ ಪರ ಲೆಕ್ಕಾಚಾರ ಹಾಕುತ್ತಿದ್ದಾರೆ. ಆದರೆ ನವಲಗುಂದದಲ್ಲಿ ಕೈ ಅಭ್ಯರ್ಥಿ ವಿನೋದ ಅಸೂಟಿ ಪರ ನವಲಗುಂದದ ಅಭಿಮಾನಿಯೊಬ್ಬ ಕವಡೆ ಶಾಸ್ತ್ರ ಕೇಳಿದ್ದಾರೆ. ಈ ಶಾಸ್ತ್ರದಲ್ಲಿ ಅಸೂಟಿಯವರಿಗೆ ಗೆಲ್ಲು ಪಕ್ಕಾ ಎಂಬ ಸೂಚನೆ ಸಿಕ್ಕಿದೆ ಎಂದು ಹೇಳಲಾಗಿದ್ದು, ಆ ವಿಡಿಯೋ ಈಗ ಧಾರವಾಡದಲ್ಲಿ ಪುಲ್ ವೈರಲಾಗುತ್ತಿದೆ.
ಬಿಜೆಪಿಯವರು ನಮ್ಮನ್ನು ರಾಜಕೀಯ ಮಾಡಲು ಆಹ್ವಾನಿಸುತ್ತಿದ್ದಾರೆ ನಾವು ಮಾಡಿ ತೋರಿಸುತ್ತೇವೆ: ಡಿಕೆಶಿ
ಮಾನ್ಯ ಪ್ರಧಾನಿಯವರೇ, ಸಂಘದಲ್ಲಿ ಕಲಿತ ಪಾಠ ಬಿಟ್ಟು ವಾಸ್ತವಕ್ಕೆ ಕಣ್ತೆರೆಯಿರಿ: ಸಿಎಂ ಸಿದ್ದರಾಮಯ್ಯ




