ವೋಟರ್ ಐಡಿ ಹಗರಣ : ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಬಂಧನ

ಬೆಂಗಳೂರು: ವೋಟರ್ ಐಡಿ ಹಗರಣದ ವಿಚಾರವಾಗಿ ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಮತ್ತು ಸಹೋದರ ಕೆಂಪೇಗೌಡ ಸೇರಿ 5 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಲಾಲ್ ಬಾಗ್ ಬಳಿ ಆರೋಪಿ ರವಿಕುಮಾರ್ ಅವರನ್ನು ಬಂಧಿಸಿದ್ದಾರೆ. ವಕೀಲರ ಭೇಟಿಗೆ ಬಂದಾಗ ರವಿಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಜಮೀನು ವಿಷಯದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಇದುವರೆಗೆ ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್, ಸಹೋದರ, ಸಂಸ್ಥೇಯ ಮೇಲ್ವಿಚಾರಕ ಕೆಂಪೇಗೌಡ, ಚಿಲುಮೆ ಸಂಸ್ಥೆ ಸಿಬ್ಬಂದಿ ಧರ್ಮೇಶ್, ರೇಣುಕಾ ಪ್ರಸಾದ್ ಹಾಗೂ ಪ್ರಜ್ವಲ್ ರನ್ನು ಬಂಧಿಸಲಾಗಿದೆ. ಕೇಸ್ ಸಂಬಂಧ ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ ಗೌಡ ಮಾಹಿತಿ ನೀಡಿದ್ದು, ಇಂದಿನಿಂದ ಬಿಬಿಎಂಪಿ ಆರ್ ಒಗಳ ವಿಚಾರಣೆ ನಡೆಸಲಾಗುತ್ತದೆ. ಪ್ರಕರಣ ಸಂಬಂಧ ಇದುವರೆಗೆ 15 ಜನರನ್ನು ವಿಚಾರಣೆ ಮಾಡಲಾಗಿದೆ ಎಂದು ಹೇಳಿದರು.

ಚಳಿಗಾಲದಲ್ಲಿ ತಿನ್ನಬಹುದಾದ 5 ಅದ್ಭುತ ಆಹಾರಗಳು…!

ಇಂಥ ವಿಷಯಗಳನ್ನ ಮಾತ್ರ ಯಾರಲ್ಲಿಯೂ ಹೇಳಬೇಡಿ..

About The Author