ಇನ್ನು ಸ್ಪಲ್ಪ ದಿನಗಳಲ್ಲಿ ಬಿಜೆಪಿಯ ಪರಿಸ್ಥಿತಿ ಏನಾಗಲಿದೆ ಎಂದು ಕಾದು ನೋಡಿ: ಸಿಎಂ ಸಿದ್ದರಾಮಯ್ಯ

Political News: ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲವೆಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ರಾಮಮಂದಿರ ನಿರ್ಮಾಣ ಮಾಡಿ, ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲವೆಂದು ಸಿಎಂ ಸಿದ್ದರಾಮಯ್ಯ ಈಗಾಗಲೇ ಹೇಳಿದ್ದಾರೆ. ಅದೇ ರೀತಿ ಇಂದು ಕೂಡ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಇನ್ನು ಸ್ವಲ್ಪ ದಿನದಲ್ಲಿ ಬಿಜೆಪಿ ಪರಿಸ್ಥಿತಿ ಏನಾಗಲಿದೆ ಎಂದು ಕಾದು ನೋಡಿ ಎಂದಿದ್ದಾರೆ.

ಇಂದು ಚುನಾವಣೆ ನಡೆದರೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬುದು ಯಡಿಯೂರಪ್ಪನವರಿಗೆ ಬಿದ್ದಿರುವ ಕನಸಾಗಿರಬಹುದು, ಆದರೆ ಅದು ನನಸಾಗಲ್ಲ. ಚುನಾವಣೆಯಲ್ಲಿ ಕೇವಲ 66 ಸೀಟು ಪಡೆದು ವಿರೋಧ ಪಕ್ಷದಲ್ಲಿ ಕುಳಿತಿದ್ದಾರೆ. ಅವರ ಮಗ ವಿಜಯೇಂದ್ರರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದರಿಂದ ಬಿಜೆಪಿಯ ಅನೇಕ ನಾಯಕರು ಅಸಮಧಾನಗೊಂಡಿದ್ದಾರೆ. ಇನ್ನು ಸ್ಪಲ್ಪ ದಿನಗಳಲ್ಲಿ ಬಿಜೆಪಿಯ ಪರಿಸ್ಥಿತಿ ಏನಾಗಲಿದೆ ಎಂದು ನಾವು ನೀವೆಲ್ಲ ನೋಡಬಹುದು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ತುಮಕೂರು ತಾಲೂಕು ಕಚೇರಿಗೆ ಸಚಿವರ ಧಿಡೀರ್ ಭೇಟಿ: ಕಕ್ಕಾಬಿಕ್ಕಿಯಾದ ಅಧಿಕಾರಿಗಳು

‘ಪ್ರಧಾನಿ ಮೋದಿಯವರ ಈ ನಡೆಯನ್ನು ರಾಜಕೀಯ ಇಬ್ಬಂದಿತನ ಎಂದು ಕರೆಯದೆ ಬೇರೇನು ಹೇಳಬೇಕು?’

‘ಕುಮಾರಸ್ವಾಮಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನೂ ತಿಳಿದಿಲ್ಲ. ಸುಳ್ಳೇ ಅವರ ಮನೆದೇವರು’

About The Author