Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಲೆ ಏರಿಕೆ ಖಂಡಿಸಿ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭನೆ ನಡೆಸುತ್ತಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹುಬ್ಬಳ್ಳಿ Airport ಗೆ ಬಂದಿಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಧ್ಯಮದವರ ಜತೆ ಮಾತನಾಡಿದ್ದಾರೆ.
ಬೆಲೆ ಏರಿಕೆ ವಿಚಾರದಲ್ಲಿ ನಾವು ಪ್ರತಿಭಟನೆ ಹಮ್ಮಿಕ್ಕೊಂಡಿದ್ದೆವೆ. ಎಐಸಿಸಿ ಅಧ್ಯಕ್ಷ ಖರ್ಗೆ, ರಾಜ್ಯ ಉಸ್ತುವಾರಿ ಸರ್ಜೆವಾಲಾ ಭಾಗಿಯಾಗಿದ್ದಾರೆ. ಬಿಜೆಪಿಯವರ ಮೆಲೆ ಜನರ ಆಕ್ರೋಶ ಇದೆ. ಆ ಕಾರಣಕ್ಕೆ ನಾವು ಕೇಂದ್ರ ಸರಕಾರದ ವಿರುದ್ದ ಪ್ರತಿಭಟನೆಯನ್ನ ಮಾಡುತ್ತಿದ್ದೆವೆ ಎಂದು ಡಿಕೆಶಿ ಹೇಳಿದ್ದಾರೆ.
ಪುರದ ಹಿತ ಕಾಪಾಡುತ್ತಿರುವವರು ಪೌರ ಕಾರ್ಮಿಕರು. ಕಾಂಗ್ರೆಸ್ ಪಕ್ಷ ಪೌರ ಕಾರ್ಮಿಕರನ್ನು ಸರ್ಕಾರಿ ಕಾರ್ಮಿಕರನ್ನಾಗಿ ಮಾಡುವ ಮಾತು ಕೊಟ್ಟಿತ್ತು. ನಾವುಗಳು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಪೌರ ಕಾರ್ಮಿಕರ ಮಕ್ಕಳೇ ಇಂದು ಈ ಕಾರ್ಯಕ್ರಮವನ್ನು ನಡೆಸುತ್ತಿದ್ದಾರೆ. ಯೋಗಿ ಎನಿಸಿಕೊಳ್ಳುವುದಕ್ಕಿಂತ ಉಪಯೋಗಿ ಎನಿಸಿಕೊಂಡರೆ ಬದುಕಿಗೆ ಹೆಚ್ಚು ಬೆಲೆ. ಪೌರಕಾರ್ಮಿಕರನ್ನು ಕುವೆಂಪು ಅವರು ಶಿವನಿಗೆ ಹೋಲಿಸಿದ್ದರು. ‘ಬೀದಿ ಗುಡಿಸುವ ಬಡವನೆದೆಯಲ್ಲಿ ನಾವಿದ್ದೇವೆ. ಉಳುಮೆ ಮಾಡುವ ಒಕ್ಕಲಿಗನ ಜತೆ ನಾವಿದ್ದೇವೆ. ಅಂಜದಿರು ಸೋದರನೇ ನಿಮ್ಮ ಜತೆ ನಾವಿದ್ದೇವೆ’ ಎಂದು ಕುವೆಂಪು ಅವರು ಹೇಳಿದ್ದರು.
ಕಾರ್ಮಿಕರ ದಿನದ ಶುಭಸಂದರ್ಭದಲ್ಲಿ ನಿಮ್ಮ ಬದುಕು ಬದಲಾವಣೆಯಾಗುತ್ತಿದೆ. ಇಂದು ನೀವು ಸರ್ಕಾರಿ ನೌಕರರಾಗಿದ್ದೀರಿ. ಸಿಂಧುತ್ವ ವಿಚಾರದಲ್ಲಿ ಕೆಲವು ಗೊಂದಲಗಳಿರುವ ಕಾರಣಕ್ಕೆ ಕೆಲವರ ಕೆಲಸ ಖಾಯಂ ಆಗಿಲ್ಲ. ಈ ಬಗ್ಗೆ ಪ್ರತ್ಯೇಕವಾಗಿ ಬೂತ್ ಆರಂಭಿಸಿ, ನಿಮ್ಮ ದಾಖಲೆಗಳನ್ನು ಪರಿಶೀಲನೆ ಮಾಡಿಸಿ ನಿಮ್ಮೆಲ್ಲರಿಗೂ ನ್ಯಾಯ ಒದಗಿಸಲಾಗುವುದು. ನಿವೃತ್ತಿಯಾದಾಗ 10 ಲಕ್ಷ ಹಣವನ್ನು ಡೆಪಾಸಿಟ್ ಮಾಡಿ 6 ಸಾವಿರ ಪಿಂಚಣಿ ದೊರೆಯುವಂತೆ ಯೋಜನೆ ರೂಪಿಸಿದ್ದೇವೆ. ನಾವು ಆಯುಕ್ತರಿಗೆ ನೀಡುವ ಗೌರವವನ್ನು ಪೌರಕಾರ್ಮಿಕರಿಗೂ ನೀಡಬೇಕು ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.