Friday, June 20, 2025

Latest Posts

Congress ನಡೆಸುತ್ತಿರುವಂತ ಪಾದಯಾತ್ರೆಗೆ ನಮ್ಮ ಬೆಂಬಲ ಇಲ್ಲ : ವಾಟಾಳ್ ನಾಗರಾಜ್

- Advertisement -

ರಾಮನಗರ: ಜ.9ರಂದು ಮೇಕೆದಾಟು ಯೋಜನೆ ( Mekedatu Project ) ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಪಾದಯಾತ್ರೆಗೆ ( mekedatu padayatre ) ನಮ್ಮ ಬೆಂಬಲವಿಲ್ಲ ಎಂಬುದಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ (Vatal Nagaraj ) ತಿಳಿಸಿದ್ದಾರೆ.

ನಗರದಲ್ಲಿ ಇಂದು ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮೇಕೆದಾಟು ಜನರಿಗೆ ನೀರು ಒದಗಿಸುವಂತ ಉತ್ತಮ ಯೋಜನೆಯಾಗಿದೆ. ಆ ನಿಟ್ಟಿನಲ್ಲಿ ಹಲವು ವರ್ಷಗಳಿಂದ ಮೇಕೆದಾಟು ಯೋಜನೆ ಜಾರಿಗಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಮೇಕೆದಾಟು ಯೋಜನೆ ಜಾರಿಯಾಗಬೇಕು ಅಂದ್ರು.

ನಾನು ಕೂಡ ಮೇಕೆದಾಟು ಯೋಜನೆ ಜಾರಿಗಾಗಿ ಹೋರಾಟ ಮಾಡುತ್ತೇನೆ. ಆದ್ರೇ ಕಾಂಗ್ರೆಸ್ ನಡೆಸುತ್ತಿರುವಂತ ಪಾದಯಾತ್ರೆಗೆ ನಮ್ಮ ಬೆಂಬಲ ಇಲ್ಲ. ಇದೇ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಸ್ಥಿತ್ವದಲ್ಲಿ ಇದ್ದಾಗ ಯಾಕೆ ಯೋಜನೆ ಮಾಡಲಿಲ್ಲ.? ಈಗ ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಜನವರಿ 9ರಿಂದ ಆರಂಭಿಸುತ್ತಿರುವಂತ ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್ ಅವರ ಪಾಡಿಗೆ ಅವರು ಪಾದಯಾತ್ರೆ ಮಾಡಲಿ, ನಾವು ಬೆಂಬಲಿಸೋದಿಲ್ಲ. ಮುಂದಿನ ದಿನಗಳಲ್ಲಿ ನಾವು ಈ ಯೋಜನೆಗಾಗಿ ಉಗ್ರ ಚಳುವಳಿಯನ್ನೇ ಮಾಡೋದಾಗಿ ಘೋಷಿಸಿದರು.


- Advertisement -

Latest Posts

Don't Miss