Saturday, July 27, 2024

Latest Posts

ಪ್ರಜ್ವಲ್ ರೇವಣ್ಣ ದುಬೈ ಬಿಟ್ಟು ಇನ್ನು ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ

- Advertisement -

Political News: ಸಿಎಂ ಸಿದ್ದರಾಮಯ್ಯ ಕೇಂದ್ರಸರ್ಕಾರ ಮತ್ತು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದು, ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಕೊಲೆ ನಡೆದ ದಿನವೇ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣವನ್ನು ಸಿಐಡಿ ಗೆ ವಹಿಸಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಯಾಗಿಸಲು ಪ್ರಯತ್ನಿಸಲಾಗಿದೆ. ನೊಂದ ಕುಟುಂಬಕ್ಕೆ ನ್ಯಾಯ ಕೊಡಿಸಲು ಒಂದು ಸರ್ಕಾರವಾಗಿ ನಾವು ನಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇವೆ. ಸುಳ್ಳು ಸುಳ್ಳೇ ಲವ್ ಜಿಹಾದ್ ಎನ್ನುವ ಅಮಿತ್ ಶಾ ಮಣಿಪುರದಲ್ಲಿ ಏನು ಕ್ರಮ ಕೈಗೊಂಡಿದ್ದಾರೆ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ನೀಡಲು ಸೂಚಿಸಿದ್ದೇನೆ. ವಿಪರ್ಯಾಸವೆಂದರೆ ಕೇಂದ್ರ ಬಿಜೆಪಿ ಸರ್ಕಾರ ಆರೋಪಿಯ ರಕ್ಷಣೆಗೆ ನಿಂತಿದೆ. ತಮಗೂ ರೇವಣ್ಣನ ಕುಟುಂಬಕ್ಕೂ ಸಂಬಂಧವಿಲ್ಲ ಎನ್ನುತ್ತಿದ್ದ ಕುಮಾರಸ್ವಾಮಿ ಹಾಗೂ ದೇವೇಗೌಡರು ತಮ್ಮ ಮನೆಗೆ ವಕೀಲರನ್ನು ಕರೆಸಿ ಚರ್ಚೆ ಮಾಡಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಹೋದಾಗ ನಾನು ಬೇರೆಯಲ್ಲ, ಪ್ರಜ್ವಲ್ ರೇವಣ್ಣ ಬೇರೆಯಲ್ಲ ಎಂದಿದ್ದರು. ರಾಜಕೀಯ ಹಾಗೂ ಪಾಪ ಕೃತ್ಯಗಳನ್ನು ಅವರೆಲ್ಲರೂ ಒಟ್ಟಿಗೆ ಮಾಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ.

ಅಂತಾರಾಷ್ಟ್ರೀಯ ಪ್ರಯಾಣ ಮಾಡುವಾಗ ಎಲ್ಲರ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ ಬಿಜೆಪಿ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ. ಪ್ರಜ್ವಲ್ ರೇವಣ್ಣ ದುಬೈ ಬಿಟ್ಟು ಇನ್ನು ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ. ಅವರು ದೇಶಕ್ಕೆ ಬರಲೇಬೇಕು. ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ನ್ನು ರದ್ದು ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ಪ್ರಜ್ವಲ್ ರೇವಣ್ಣ ಅವರ ಕೃತ್ಯದ ಬಗ್ಗೆ ತಿಳಿದೂ ಬಿಜೆಪಿ ಪಕ್ಷ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದು ಸಿಎಂ ಆರೋಪಿಸಿದ್ದಾರೆ.

ಕಾಂಗ್ರೆಸ್ ನಾಯಕರಿಗೆ ನಾಚಿಕೆ, ಮಾನ, ಮರ್ಯಾದೆಯೇ ಇಲ್ಲ: ಕೇಂದ್ರ ಸಚಿವ ಜೋಶಿ

ಶೋಷಿತರ ಶ್ರೇಯೋಭಿವೃದ್ಧಿಗಾಗಿ ಗ್ಯಾರಂಟಿ ಜಾರಿ: ವಿನೋದ ಅಸೂಟಿ

ದತ್ತು ಪುತ್ರನೊಂದಿಗೆ ಸಲ್ಲಾಪ: ರೆಡ್‌ಹ್ಯಾಂಡ್‌ ಆಗಿ ಗಂಡನ ಎದುರು ಸಿಕ್ಕಿಬಿದ್ದ ಮಹಿಳಾ ರಾಜಕಾರಣಿ

- Advertisement -

Latest Posts

Don't Miss