ಬೆಂಗಳೂರು: ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ನೇತೃತ್ವದಲ್ಲಿ ಮಹತ್ವದ ಕೊರೋನಾ ನಿಯಂತ್ರಣ ( Corona Control ) ಸಭೆ ನಡೆಯಿತು. ಈ ಸಭೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದಂತ ವೀಕೆಂಡ್ ಕರ್ಪ್ಯೂ (Weekend Curfew) ರದ್ದುಗೊಳಿಸಲಾಗಿದೆ. ಈ ಬಗ್ಗೆ ಹೊಸ ಪರಿಷ್ಕೃತ ಮಾರ್ಗಸೂಚಿಯನ್ನು (New Covid19 Guidelines) ಪ್ರಕಟಿಸಿದ್ದು, ಯಾವುದಕ್ಕೆ ಅನುಮತಿ, ಯಾವುದಕ್ಕೆ ಇಲ್ಲ ಎನ್ನುವ ಬಗ್ಗೆ ತಿಳಿಯೋಣ ಬನ್ನಿ.
ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಪರಿಷ್ಕೃತ ನೂತನ ಮಾರ್ಗಸೂಚಿಯನ್ನು ಹೊರಡಿಸಿದ್ದು, ಈ ಹಿಂದೆ ಜಾರಿಗೊಳಿಸಿದ್ದಂತ ಶುಕ್ರವಾರ ರಾತ್ರಿ 10 ರಿಂದ ಆರಂಭಗೊಂಡು ಸೋಮವಾರ ಬೆಳಿಗ್ಗೆ 5 ಗಂಟೆಗೆಯವರೆಗಿನ ವೀಕೆಂಡ್ ಕರ್ಪ್ಯೂವನ್ನು ವಾಪಾಸ್ ಪಡೆಯಲಾಗಿರೋದಾಗಿ ತಿಳಿಸಿದ್ದಾರೆ.
ಇನ್ನೂ ಈ ಹಿಂದಿನಂತೆ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ರಾಜ್ಯಾಧ್ಯಂತ ಮುಂದುವರೆಯಲಿದೆ. ಎಲ್ಲಾ ದಿನಗಳಲ್ಲಿಯೂ ರಾತ್ರಿ ಕರ್ಪ್ಯೂ ಜಾರಿಯಲ್ಲಿ ಇರಲಿದೆ. ಕೊರೋನಾ ಸೋಂಕಿನ ಹೆಚ್ಚಳ ಹಾಗೂ ಆಸ್ಪತ್ರೆಗೆ ದಾಖಲಾಗುವ ಸಂಖ್ಯೆಗೆ ಅನುಗುಣವಾಗಿ ಈ ಆದೇಶ ಮಾರ್ಪಡಿಸೋದಾಗಿ ತಿಳಿಸಿದ್ದಾರೆ.
ವೀಕೆಂಡ್ ಕರ್ಪ್ಯೂ ಮಾತ್ರವೇ ರದ್ದುಗೊಳಿಸಲಾಗಿದೆ. ಕೊರೋನಾ ನಿಯಂತ್ರಣ ಕ್ರಮವಾಗಿ ಈ ಹಿಂದೆ ಜಾರಿಯಲ್ಲಿದ್ದಂತ ಎಲ್ಲಾ ನಿಯಮಗಳು ಮುಂದುವರೆಯಲಿವೆ. Rallies, ಧರಣಿ, ಪ್ರತಿಭಟನೆ ಸೇರಿದಂತೆ ಸಾಮಾಜಿಕ, ಧಾರ್ಮಿಕ, ರಾಜಕೀಯ ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ.
ಮದುವೆ ಸಮಾರಂಭಗಳಿಗೆ ಕೊರೋನಾ ಸೋಂಕಿನ ತೀವ್ರತೆಯ ನಡುವೆಯೂ ಅವಕಾಶ ನೀಡಲಾಗಿದೆ. ಓಪನ್ ಸ್ಥಳದಲ್ಲಿ ನಡೆಯೋ ಮದುವೆಗೆ 200 ಜನರು, ಮುಚ್ಚಿದ ಪ್ರದೇಶದಲ್ಲಿ ನಡೆಯೋ ಮದುವೆಗೆ 100 ಜನರ ಮಿತಿಯನ್ನು ಮುಂದುವರೆಸಲಾಗಿದೆ.
ಎಲ್ಲಾ ಪಬ್, ಕ್ಲಬ್, ರೆಸ್ಟೋರೆಂಟ್, ಬಾರ್, ಹೋಟೆಲ್, ಊಟದ ಸ್ಥಳಗಳು ಸೇರಿದಂತೆ ಇತರೆ ಪ್ರದೇಶಗಳಲ್ಲಿ ಶೇ.50ರ ಜನರು ಸೇರುವ ಮಿತಿಯ ನಿರ್ಬಂಧ ವಿಧಿಸಲಾಗಿದೆ. ಕೊರೋನಾ ಮಾರ್ಗಸೂಚಿಯನ್ನು ಅನುಸರಿಸುವಂತೆ ಸೂಚಿಸಲಾಗಿದೆ. ಅಲ್ಲದೇ ಸಂಪೂರ್ಣ ಡೋಸ್ ಲಸಿಕೆ ಪಡೆದಂತವರಿಗೆ ಮಾತ್ರವೇ ಅವಕಾಶ ನೀಡಲಾಗಿದೆ.
ಸಿನಿಮಾ, ಹಾಲ್, ಮಲ್ಟಿಪ್ಲೆಕ್ಸ್, ಚಿತ್ರಮಂದಿರ, ರಂಗಮಂದಿರ, ಆಡಿಟೋರಿಯಂ, ಹೆಚ್ಚು ಜನರು ಸೇರಿವಂತ ಸ್ಥಳದಲ್ಲಿ ಶೇ.50 ಜನರು ಸೇರುವಂತ ಮಿತಿಯನ್ನು ವಿಧಿಸಲಾಗಿದೆ. ಮಹಾರಾಷ್ಟ್ರ, ಕೇರಳ ಮತ್ತು ಗೋವಾ ಸೇರಿದಂತೆ ಗಡಿ ಭಾಗಗಳಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ. ಒಂದು ವೇಳೆ ನಿಯಮ ಮೀರಿದವರ ವಿರುದ್ಧ ಕೋವಿಡ್ ನಿಯಂತ್ರಣ ಕ್ರಮದಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಆದೇಶಿಸಲಾಗಿದೆ.