Sunday, September 8, 2024

Latest Posts

Wet garbage: ಜೈವಿಕ ಅನಿಲ ಘಟಕದ ಪ್ರಾಯೋಗಿಕ ಚಾಲನೆಗೆ ಸೂಚನೆ:

- Advertisement -

ಬೆಂಗಳೂರು: ನಗರದ ದಕ್ಷಿಣ ವಲಯ ಪಟ್ಟಾಭಿರಾಮನಗರದಲ್ಲಿ ಹಸಿ ತ್ಯಾಜ್ಯದಿಂದ ಜೈವಿಕ ಅನಿಲ ಉತ್ಪಾದಿಸುವ ಘಟಕವನ್ನು ಉನ್ನತೀಕರಿಸಲಾಗಿದ್ದು, ಅದನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಲು ದಕ್ಷಿಣ ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಜೈವಿಕ ಅನಿಲ ಘಟಕಗಳನ್ನು ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಹಸಿ ತ್ಯಾಜ್ಯವನ್ನು ಮೂಲದಲ್ಲಿಯೇ ಸಂಸ್ಕರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಇರುವ ಜೈವಿಕ ಅನಿಲ ಘಟಕಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಂಡು ಹಸಿ ತ್ಯಾಜ್ಯದಿಂದ ಜೈವಿಕ ಅನಿಲ ಉತ್ಪಾದಿಸಿ ಅದನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಾಭಿರಾಮನಗರದಲ್ಲಿ ಸ್ಥಗಿತವಾಗಿದ್ದ ಜೈವಿಕ ಅನಿಲ ಘಟಕವನ್ನು ಉನ್ನತೀಕರಿಸಲಾಗಿದ್ದು, ಪ್ರತಿನಿತ್ಯ 5 ಟನ್ ಹಸಿ ತ್ಯಾಜ್ಯವನ್ನು ಸ್ಕಂಸ್ಕರಣೆ ಮಾಡಲಿದ್ದು, ಅದರಿಂದ 300 ಕ್ಯೂಬಿಕ್ ಮೀಟರ್ ಜೈವಿಕ ಅನಿಲ ಉತ್ಪಾದಿಸಬಹುದಾಗಿದೆ. ಈ ಸಂಬಂಧ ಕೂಡಲೆ ಪ್ರಾಯೋಗಿಕವಾಗಿ ಪ್ರಾರಂಭಿಸಿ ಉತ್ಪತ್ತಿಯಾಗುವ ಜೈವಿಕ ಅನಿಲವನ್ನು ವಿದ್ಯುತ್ ಆಗಿ ಪರಿವರ್ತಿಸಿ ಹತ್ತಿರದ ಉದ್ಯಾನವನ ಹಾಗೂ ಬೀದಿ ದೀಪಗಳಿಗೆ ಬಳಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

Protest: ಮಹದಾಯಿ ನೀರಿಗಾಗಿ, ಚಕ್ಕಡಿ ಸಮೇತ ಡಿಸಿ ಕಚೇರಿ ಮುಂದೆ ರೈತರ ಧರಣಿ

Protest: ಕಟ್ಟಡ ಕಾರ್ಮಿಕರಿಂದ ಪ್ರತಿಭಟನೆ: ಸರ್ಕಾರದ ವಿರುದ್ದ ಘೋಷಣೆ

Mysore: ವಿಶ್ವ ವಿಖ್ಯಾತ ಮೈಸೂರು ದಸರಾಗೆ ಗಜ ಪೂರ್ವ ಸಿದ್ಧತೆ

- Advertisement -

Latest Posts

Don't Miss