ನೇಹಾ ಹಿರೇಮಠ ಕೊಲೆಗೆ ಕಾರಣವೇನು?- ಪೊಲೀಸರ ಮುಂದೆ ಆರೋಪಿ ಹೇಳಿದ್ದೇನು..?

Hubli News: ಹುಬ್ಬಳ್ಳಿ : ಕಾಲೇಜು ಕ್ಯಂಪಸ್‌ನಲ್ಲೇ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಫಯಾಜ್‌ (Fiaz) ಪೊಲೀಸರ ಮುಂದೆ ಕಾರಣ ಬಾಯ್ಬಿಟ್ಟಿದ್ದಾನೆ.

ಈ ಸಂಬಂಧ ಹುಬ್ಬಳ್ಳಿಯಲ್ಲಿ ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಆರೋಪಿ ಪ್ರಕಾರ ಬಿಸಿಎ ಓದುವಾಗಿನಿಂದ ನೇಹಾ (Neha Hiremath) ಮತ್ತು ಫಯಾಜ್‌ ಲವ್‌ ಮಾಡುತ್ತಿದ್ದರು. ಇತ್ತೀಚೆಗೆ ಯುವತಿ ಆತನನ್ನು ಅವೈಡ್‌ ಮಾಡುತ್ತಿದ್ದಳಂತೆ. ಇದೇ ಕಾರಣಕ್ಕೆ ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ ಎಂದರು.

ಸದ್ಯ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತೇವೆ. ಅಲ್ಲದೆ ಪ್ರಕರಣ ಸಂಬಂಧ ಸಾಕ್ಷ್ಯಗಳನ್ನು ಕೂಡ ಸಂಗ್ರಹಿಸುತ್ತೇವೆ ಎಂದು ಅವರು ತಿಳಿಸಿದರು.

ಇಂದು ಸಂಜೆ 4.45ರ ಸುಮಾರಿಗೆ ನೇಹಾ ಕೊಲೆಯಾಗಿದೆ. ಆಕೆ ಕಾಲೇಜಿನಿಂದ ಹೊರಬರುತ್ತಿದ್ದಂತೆಯೇ ಆರೋಪಿ ಫಯಾಜ್‌ ಏಕಾಏಕಿ ಆಕೆಯ ಮೇಲೆ ನಾಲ್ಕೈದು ಬಾರಿ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ. ಕೂಡಲೇ ಕಾಲೇಜಿನ ಆಡಳಿತ ಮಂಡಳಿ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅದಾಗಲೇ ಆಕೆ ಸಾವನ್ನಪ್ಪಿದ್ದಾಳೆ ಎಂದರು.

ಇತ್ತ ಚಾಕು ಇರಿದ ಬಳಿಕ ಆರೋಪಿ ಆತನ ಊರಿನ ಕಡೆ ಪರಾರಿಯಾಗಲು ಯತ್ನಿಸಿದ್ದ. ಆದರೆ ಘಟನೆ ನಡೆದು 1 ಗಂಟೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ನಮ್ಮ ಪೊಲೀಸರ ತಂಡ ಯಶಸ್ವಿಯಾಗಿದೆ ಎಂದು ಹೇಳಿದರು.

ಘಟನೆ ಖಂಡಿಸಿ‌ ಪ್ರತಿಭಟನೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರತಿಭಟನೆ ಮಾಡಲಿ. ನಾವು ಎಲ್ಲದಕ್ಕೂ ಸಿದ್ದತೆ ಮಾಡಿಕೊಂಡಿದ್ದೇವೆ ಎಂದರು.

ಇಂದು ಸಂಜೆ 4.45ರ ಸುಮಾರಿಗೆ ನೇಹಾ ಕೊಲೆಯಾಗಿದೆ. ಆಕೆ ಕಾಲೇಜಿನಿಂದ ಹೊರಬರುತ್ತಿದ್ದಂತೆಯೇ ಆರೋಪಿ ಫಯಾಜ್‌ ಏಕಾಏಕಿ ಆಕೆಯ ಮೇಲೆ ನಾಲ್ಕೈದು ಬಾರಿ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ. ಕೂಡಲೇ ಕಾಲೇಜಿನ ಆಡಳಿತ ಮಂಡಳಿ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅದಾಗಲೇ ಆಕೆ ಸಾವನ್ನಪ್ಪಿದ್ದಾಳೆ ಎಂದರು.

ಇತ್ತ ಚಾಕು ಇರಿದ ಬಳಿಕ ಆರೋಪಿ ಆತನ ಊರಿನ ಕಡೆ ಪರಾರಿಯಾಗಲು ಯತ್ನಿಸಿದ್ದ. ಆದರೆ ಘಟನೆ ನಡೆದು 1 ಗಂಟೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ನಮ್ಮ ಪೊಲೀಸರ ತಂಡ ಯಶಸ್ವಿಯಾಗಿದೆ ಎಂದು ಹೇಳಿದರು.

ಘಟನೆ ಖಂಡಿಸಿ‌ ಪ್ರತಿಭಟನೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರತಿಭಟನೆ ಮಾಡಲಿ. ನಾವು ಎಲ್ಲದಕ್ಕೂ ಸಿದ್ದತೆ ಮಾಡಿಕೊಂಡಿದ್ದೇವೆ ಎಂದರು.

ಕಾಂಗ್ರೆಸ್ ಕಾನೂನು ಸುವ್ಯವಸ್ಥೆಯ ಹೊಣೆಗಾರಿಕೆಯನ್ನು ಈ ಮಾತಂಧರ ಕೈಗಿಟ್ಟು ನಿದ್ದೆ ಹೋಗಿದೆ: ಪ್ರೀತಂಗೌಡ

ಯಾವುದೇ ಸಮಯದಲ್ಲೂ ಕರ್ನಾಟಕ ಸದಾ ಕೇರಳದ ಜೊತೆ ಇರಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಸರ್ಕಾರದ ಕುಮ್ಮಕ್ಕು ಇಂಥ ದುಷ್ಟಶಕ್ತಿಗಳಿಗೆ ಇರುವುದು ಸ್ಪಷ್ಟವಾಗಿದೆ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

About The Author