Friday, September 20, 2024

Latest Posts

ಪ್ರಿನ್ಸ್ ಎದುರು ಖಳನಾಯಕನಾಗಿ ಅಬ್ಬರಿಸುವುದು ಕಿಚ್ಚಾನಾ? ಉಪ್ಪಿನಾ?

- Advertisement -

ಸರ್ಕಾರಿ ವಾರಿ ಪಟ, ಸದ್ಯ ತೆಲುಗಿನಲ್ಲಿ ಮೂಡಿಬರಲು ಸಜ್ಜಾಗಿರುವ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಬಹುನಿರೀಕ್ಷಿತ ಚಿತ್ರ. ಈ ಮೊದಲು ಈ ಚಿತ್ರದಲ್ಲಿ ಕಿಚ್ಚ ಸುದೀಪ್ ವಿಲನ್ ಆಗಿ ಅಬ್ಬರಿಸುತ್ತಾರೆ ಎಂದು ಹೇಳಲಾಗಿತ್ತು. ಆದ್ರೀಗ ರಿಯಲ್ ಸ್ಟಾರ್ ಉಪೇಂದ್ರ ನಟಿಸುತ್ತಾರೆಂದು ಹೇಳಲಾಗುತ್ತಿದೆ.

ಗೀತ ಗೋವಿಂದಂ ಖ್ಯಾತಿಯ ನಿರ್ದೇಶಕ ಪರಷುರಾಮ್ ಸರ್ಕಾರಿ ವಾರಿ ಪಟ ಚಿತ್ರ ನಿರ್ದೇಶನ ಮಾಡುತ್ತಿದ್ದು, ಚಿತ್ರದಲ್ಲಿ ನಟಿಸುವ ಬಗ್ಗೆ ಉಪೇಂದ್ರ ಬಳಿ ಮಾತನಾಡಿದ್ದು, ರಿಯಲ್ ಸ್ಟಾರ್ ಇದಕ್ಕೆ ಒಪ್ಪಿಗೆ ಸೂಚಿಸುವುದಷ್ಟೇ ಬಾಕಿ ಇದೆ ಎನ್ನಲಾಗಿದೆ.

https://youtu.be/GiOGqc5Y7nQ

ಈ ಮೊದಲು ಉಪೇಂದ್ರ, ಸನ್ ಆಫ್ ಸತ್ಯಮೂರ್ತಿ ಚಿತ್ರದಲ್ಲಿ ನಟಿಸಿದ್ದು, ಅಲ್ಲು ಅರ್ಜುನ್ ಉಪ್ಪಿಗೆ ಸಾಥ್ ಕೊಟ್ಟಿದ್ರು. ಅಲ್ಲದೇ ಮೂವರು ನಾಯಕಿಯರು ಈ ಚಿತ್ರದಲ್ಲಿದ್ದರು. ಚಿತ್ರ ಸೂಪರ್ ಹಿಟ್ ಆಗಿತ್ತು.

ತೆಲುಗು ರಾಜ್ಯದಲ್ಲೂ ಉಪ್ಪಿಗೆ ಫ್ಯಾನ್ಸ್ ಇದ್ದು, ಉಪ್ಪಿ ತೆಲುಗು ಭಾಷೆಯನ್ನ ಸರಾಗವಾಗಿ ಮಾತನಾಡಬಲ್ಲವೆಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಅಂತೆಯೇ ಪ್ರಿನ್ಸ್ ಮಹೇಶ್ ಬಾಬು ಕೂಡ ತಮ್ಮ ಚಿತ್ರದಲ್ಲಿ ಕನ್ನಡ ಕಲಾವಿದರಿಗೆ ಹೆಚ್ಚಿನ ಅವಕಾಶ ನೀಡುವುದಾಗಿ ಹೇಳಿದ್ದರು. ಅದರಂತೆ ಸರ್ಕಾರಿ ವಾರಿ ಪಟ ಚಿತ್ರದಲ್ಲಿ ಉಪೇಂದ್ರ ವಿಲನ್ ಆಗಿ ನಟಿಸಲಿದ್ದಾರೆಂಬ ಸುದ್ದಿ ಹೊರಬಿದ್ದಿದೆ.

https://youtu.be/pGVIa5YH0-M

ಒಟ್ಟಾರೆಯಾಗಿ ಈ ಹಿಂದೆ ಕೇಳಿಬಂದಂತೆ ಕಿಚ್ಚ ಸುದೀಪ್ ಸರ್ಕಾರಿ ವಾರಿ ಪಟ ಚಿತ್ರದಲ್ಲಿ ವಿಲನ್ ಆಗಿ ಬಣ್ಣ ಹಚ್ತಾರೋ ಅಥವಾ ರಿಯಲ್ ಸ್ಟಾರ್ ಉಪೇಂದ್ರ ಖಳನಾಯಕನಾಗಿ ಮಿಂಚುತ್ತಾರೋ ಅನ್ನೋದನ್ನ ಕಾದು ನೋಡಬೇಕಿದೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

- Advertisement -

Latest Posts

Don't Miss