Friday, June 20, 2025

Latest Posts

ಅಚ್ಛೇ ದಿನ್ ತರುವ ಭರವಸೆಯನ್ನು ಹುಸಿಗೊಳಿಸಿದ ಮೋದಿಯವರನ್ನು ಜನರು ಯಾಕೆ ನಂಬುತ್ತಾರೆ?: ಸಿಎಂ

- Advertisement -

Political News: ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಉಳಿದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಯಾವುದೇ ಕಗ್ಗಂಟಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ನಾವು ಬಿಜೆಪಿ ಪಕ್ಷದವರ ಹಾಗೆ 28 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ಸುಳ್ಳು ಹೇಳುವುದಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಮೈಸೂರು, ಚಾಮರಾಜನಗರ ಕ್ಷೇತ್ರವನ್ನೂ ಸೇರಿದಂತೆ ರಾಜ್ಯದ ಎಲ್ಲಾ 28 ಕ್ಷೇತ್ರವನ್ನೂ ಕಾಂಗ್ರೆಸ್ ಪ್ರತಿಷ್ಠೆಯಾಗಿ ತೆಗೆದುಕೊಳ್ಳಲಿದೆ ಎಂದಿದ್ದಾರೆ.

ನಮ್ಮ ಸರ್ಕಾರ ನುಡಿದಂತೆ ನಡೆದಿದ್ದು, ಜನರಿಗೆ ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೊಳಿಸಲಾಗಿದೆ. ಗ್ಯಾರಂಟಿಗಳಿಗೆ ಈ ವರ್ಷ ₹36,000 ಕೋಟಿ ಹಾಗೂ ಮುಂದಿನ ವರ್ಷ ₹52,009 ಕೋಟಿ ವೆಚ್ಚ ಮಾಡಲಿದ್ದೇವೆ. ಬಿಜೆಪಿ ಅವರಂತೆ ಸುಳ್ಳು ಹೇಳದೇ, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಮಾಡಿರುವ ಸಾಧನೆಗಳ ಆಧಾರದ ಮೇಲೆ ಚುನಾವಣೆಯನ್ನು ಎದುರಿಸಲಿದ್ದು, ಜನತೆ ವಿಧಾನಸಭಾ ಚುನಾವಣೆಯಂತೆ ಈಗಲೂ ನಮ್ಮ ಪಕ್ಷದ ಕೈ ಹಿಡಿಯಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿಯವರು ನುಡಿದಂತೆ ನಡೆಯಲಿಲ್ಲ. 2018 ರಲ್ಲಿ ಬಿಜೆಪಿ ಪಕ್ಷ ನೀಡಿದ 600 ಭರವಸೆಗಳಲ್ಲಿ ಶೇ. 10 ರಷ್ಟನ್ನೂ ಈಡೇರಿಸಲಿಲ್ಲ. ಪ್ರಧಾನಿ ನರೇಂದ್ರಮೋದಿ ಅವರೂ ಜನರ ಖಾತೆಗಳಿಗೆ 15 ಲಕ್ಷ ರೂ.ಗಳಾಗಲಿ, 20 ಕೋಟಿ ಉದ್ಯೋಗವಾಗಲಿ, ರೈತರ ಆದಾಯ ದ್ವಿಗುಣಗೊಳಿಸುವ ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ. ಅಚ್ಛೇ ದಿನ್ ತರುವ ಭರವಸೆಯನ್ನು ಹುಸಿಗೊಳಿಸಿದ ಮೋದಿಯವರನ್ನು ಜನರು ಯಾಕೆ ನಂಬುತ್ತಾರೆ? ಎಂದು ಸಿಎಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮೋದಿಯವರು ಪ್ರಧಾನಮಂತ್ರಿ ಆಗಲಿ ಎಂದು ಲಕ್ಷ್ಮೀನರಸಿಂಹ ಸ್ವಾಮಿಯಲ್ಲಿ ಕೇಳಿದ್ದೇನೆ: ಹೆಚ್.ಡಿ.ರೇವಣ್ಣ

ಹತ್ತು ವರ್ಷ ಮೋದಿ ಹೇಳಿದ ಸುಳ್ಳುಗಳಿವೆ. ಅದನ್ನು ಜನರಿಗೆ ತಿಳಿಸುತ್ತೇವೆ: ಸಚಿವ ಸಂತೋಷ್ ಲಾಡ್

ಇನ್ಮುಂದೆ ಈ ನಿರ್ದೇಶಕರನ್ನು ಭೇಟಿಯಾಗಬೇಕು ಅಂದ್ರೆ ಲಕ್ಷ ಲಕ್ಷ ಕೊಡಬೇಕಂತೆ..

- Advertisement -

Latest Posts

Don't Miss