- Advertisement -
ಧಾರವಾಡ: ಯುವಕನೊಬ್ಬ ಕಾರು ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಗರದ ನವಲಗುಂದ ತಾಲೂಕಿನಲ್ಲಿ ನಡೆದಿದೆ.
ನವಲಗುಂದ ತಾಲೂಕಿನ ನಿವಾಸಿ ಲೋಕನಾಥ್ (29) ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ. ಯುವಕನು ಧಾರವಾಡ ಜಿಲ್ಲಾ ಪಂಚಾಯ್ತಿಯ ಇಂಜಿನಿಯರ್ ಆಗಿದ್ದನು. ಆತ ಹುಬ್ಬಳ್ಳಿಯಿಂದ ನವಲಗುಂದಗೆ ಕೆಲಸಕ್ಕೆ ತೆರಳುತ್ತಿದ್ದಾಗ ರಸ್ತೆ ಮಧ್ಯೆಯೇ ಹೃದಯಾಘಾತವಾಗಿದೆ. ಘಟನೆಯಿಂದಾಗಿ ಕಾರು ಗದ್ದೆಯೊಂದಕ್ಕೆ ನುಗ್ಗಿದೆ. ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಘಟನೆ ಕುರಿತು ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -