Saturday, June 21, 2025

Latest Posts

ನಟ ಯುವ ರಾಜ್​ಕುಮಾರ್ ವಿಚ್ಛೇದನ ವಿಚಾರ- ನಟ ಶಿವಣ್ಣ ಅಚ್ಚರಿಯ ಹೇಳಿಕೆ!

- Advertisement -

Sandalwood News: ದೊಡ್ಮನೆ ಕುಡಿ ನಟ ಯುವ ರಾಜ್ ಕುಮಾರ್ ತಮ್ಮ ಪತ್ನಿ ಶ್ರೀದೇವಿ ಭೈರಪ್ಪಗೆ ಡಿವೋರ್ಸ್ ನೀಡಲು ಮುಂದಾಗಿದ್ದಾರೆ. ಶ್ರೀದೇವಿ ಅವರು ಕ್ರೌರ್ಯ, ಮಾನಸಿಕ ಕಿರುಕುಳ ಕೊಡುತ್ತಿದ್ದಾರೆ ಎಂದು ಆರೋಪಿ ಯುವ ರಾಜ್​ಕುಮಾರ್ ವಿಚ್ಛೇದನ ನೀಡಲು ಮುಂದಾಗಿದ್ದಾರೆ. ಈ ಕುರಿತು ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಶಿವಣ್ಣ, ಯುವ ರಾಜ್​ಕುಮಾರ್ ವಿಚ್ಛೇದನ ಕುರಿತು ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. ಮಾಹಿತಿ ಇಲ್ಲದೇ ಮಾತನಾಡೋದು ಸರಿಯಿಲ್ಲ. ಡಿವೋರ್ಸ್ ಬಗ್ಗೆ ಮೊಬೈಲ್‌ನಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ಆ ರೀತಿ ಏನಾದರೂ ಆಗಿದ್ದರೆ ಮನಸ್ಸಿಗೆ ಬೇಜಾರಾಗುತ್ತದೆ ಎಂದು ಶಿವಣ್ಣ ಮಾತನಾಡಿದ್ದಾರೆ.

ಇದೇ ವೇಳೆ ಗೀತಾ ಶಿವರಾಜ್‌ಕುಮಾರ್ ಮಾತನಾಡಿ, ಯುವ ಡಿವೋರ್ಸ್ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಹಾಗಾಗಿ ತಿಳಿದುಕೊಂಡು ಮಾತನಾಡುತ್ತೇವೆ. ಗೊತ್ತಿಲ್ಲದೇ ಮಾತನಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

7 ವರ್ಷಗಳ ಕಾಲ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಯುವ ಮತ್ತು ಶ್ರೀದೇವಿ ಜೋಡಿ ಈಗ ದಾಂಪತ್ಯಕ್ಕೆ ಅಂತ್ಯ ಹಾಡಲು ಮುಂದಾದೆ. ಜೂನ್ 6ರಂದು ಬೆಂಗಳೂರಿನ ಕೌಟುಂಬಿಕ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಯುವರಾಜ್‌ಕುಮಾರ್, ಜುಲೈ 4ರಂದು ವಿಚಾರಣೆಗೆ ನಿಗದಿಯಾಗಿದೆ. ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಶ್ರೀದೇವಿ ಅವರಿಗೆ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಸದ್ಯ ಶ್ರೀದೇವಿ ಅವರು ಅಮೆರಿಕಾದಲ್ಲಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

ದಾಖಲೆ ವೀರನಿಗೆ ಬೆಟ್ಟದಷ್ಟು ಸವಾಲು, ಕೇಳಬೇಕಿದೆ ಜನಸಾಮಾನ್ಯರ ಅಹವಾಲು..!

ಉಪಚುನಾವಣೆ ದಿನಾಂಕ ಘೋಷಣೆ

ದೊಡ್ಮನೆಯ ಕುಡಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ- ಯುವ ದಾಂಪತ್ಯದಲ್ಲಿ ಬಿರುಗಾಳಿ!

- Advertisement -

Latest Posts

Don't Miss