ಮುಂಬೈ: ಟೀಂ ಇಂಡಿಯಾದ ಆಲ್ ರೌಂಡರ್ ಯುವರಾಜ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.
ಮುಂಬೈ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಯುವರಾಜ್ ಸಿಂಗ್ ತಮ್ಮ ವೃತ್ತಿ ಜೀವನದ ಬಹುಮುಖ್ಯ ನಿರ್ಧಾರ ತೆಗೆದುಕೊಂಡಿದ್ದಾರೆ. ಯುವರಾಜ್ ಸಿಂಗ್ ಅಂತಾರಾಷ್ಟ್ರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ನಿನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಈ ಗಾಳಿಸುದ್ದಿಯನ್ನ ಯುವಿ ಕೊನೆಗೂ ನಿಜವಾಗಿಸಿಬಿಟ್ಟಿದ್ದಾರೆ.
ತಮ್ಮನ್ನು ಕಾಡಿದ್ದ ಕ್ಯಾನ್ಸರ್ ಕಾಯಿಲೆಯಿಂದ ಸಂಪೂರ್ಣ ಗುಣಮುಖರಾದ ಯುವರಾಜ್ ಸಿಂಗ್ ಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಅವಕಾಶವೇ ಸಿಕ್ಕಿರಲಿಲ್ಲ. ಕೊನೆಯದಾಗಿ 2017ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೆಣೆಸಿದ್ರು. ಇನ್ನು ಯುವಿ, ವಿದೇಶದಲ್ಲಿ ನಡೆಯೋ ಟಿ-20 ಲೀಗ್ಗಳಲ್ಲಿ ಪಾಲ್ಗೊಳ್ಳೋ ಆಲೋಚನೆಯಲ್ಲಿದ್ದಾರೆ. ಅಲ್ಲಿ ಸಿಗೋ ಅವಕಾಶ ಬಳಸಿಕೊಂಡು ತಮ್ಮ ವೃತ್ತಿ ಮುಂದುವರಿಸಲು ಯುವರಾಜ್ ಸಿಂಗ್ ನಿರ್ಧರಿಸಿದ್ದಾರೆ. ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಯುವಿ ವಿದಾಯ ಹೇಳಿರೋದು ಯುವಿ ಅಪಾರ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
ಜೂನ್ 16ರ ವಿಶ್ವಯುದ್ಧದಲ್ಲಿ ಗೆಲ್ಲೋದ್ಯಾರು…?ಮಿಸ್ ಮಾಡದೇ ಈ ವಿಡಿಯೋ ನೋಡಿ