Saturday, April 19, 2025

Latest Posts

ಮತ್ತೆ ಚರ್ಚೆಯ ಕಿಡಿಹೊತ್ತಿಸಿದ ಸತೀಶ್‌ ಜಾರಕಿಹೊಳಿ!

- Advertisement -

ಕಾಂಗ್ರೆಸ್‌ನಲ್ಲಿ ಸಮುದಾಯವಾರು ಡಿಸಿಎಂ ಹುದ್ದೆ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದೆ. ಹೆಚ್ಚುವರಿಯಾಗಿ ಡಿಸಿಎಂ ನೇಮಕ ಕುರಿತಂತೆ ಸಾಮೂಹಿಕ ಚರ್ಚೆ ಆಗಬೇಕು. ಎಐಸಿಸಿ ಹೈಕಮಾಂಡ್‌ ಮಟ್ಟದಲ್ಲಿ ಚರ್ಚೆ ಆಗಬೇಕು. ಸಿಎಂ ಮಟ್ಟದಲ್ಲೂ ಚಿಂತನೆ ಆಗಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಈ ಕುರಿತು ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯಿಸಿದ್ದು, ಹೊಸ ಡಿಸಿಎಂ ಸೃಷ್ಟಿ ಮಾಡುವುದು ಹೈಕಮಾಂಡ್​ಗೆ ಬಿಟ್ಟ ವಿಚಾರವಾಗಿದೆ. ನಾನು ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್‌ ಕೂಡ ನಮ್ಮ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಪರಮೇಶ್ವರ್, ಸತೀಶ್ ಜಾರಕಿಹೊಳಿ ಹಾಗೂ ರಾಜಣ್ಣ ಅವರು ತಮ್ಮ ಹೇಳಿಕೆಗಳನ್ನು ಕೊಡ್ತಿದ್ದಾರೆ. ಅಂತಿಮವಾಗಿ ಈ ಕುರಿತು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಜಮೀರ್ ಹೇಳಿದ್ದಾರೆ.

ಇನ್ನೂ, ಬಿಜೆಪಿ ಎಂಎಲ್​ಸಿ ಸಿ.ಟಿ.ರವಿ ಅವರು, ಎಲ್ಲಾ ಸಚಿವರು ಡಿಸಿಎಂ ಆಗಲಿ ಎಂದು ಟಾಂಗ್ ನೀಡಿದ್ರು.

- Advertisement -

Latest Posts

Don't Miss