ಬೆಂಗಳೂರು : ರಾಜ್ಯಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಈಗಾಗ್ಲೇ ಆರ್ಟಿಪಿಸಿಆರ್ ಟೆಸ್ಟ್ ಕಡ್ಡಾಯಗೊಳಿಸಿದ್ದೇವೆ. ಇನ್ನು ವಿದೇಶಿ ಪ್ರಯಾಣಿಕರಿಗೆ 7 ದಿನ ಕಡ್ಡಾಯ ಕ್ವಾರಂಟೈನ್ ಮಾಡಲಿದ್ದೇವೆ. ಅದ್ರಂತೆ,ರೋಗ ಲಕ್ಷಣ ಇದ್ದರೇ 5ನೇ ದಿನ ಆರ್ಟಿಪಿಸಿಆರ್ ಟೆಸ್ಟ್ ಮಾಡಲಾಗುತ್ತೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವರು, ‘ಕಾನೂನು ತಂದು, ದಂಡ ಹಾಕಿ ಲಸಿಕೆ ನೀಡುವ ಚಿಂತನೆ ಸರ್ಕಾರಕ್ಕೆ ಇಲ್ಲ. ಆದ್ರೆ, ದಂಡ ಹಾಕಿ ಲಸಿಕೆ ನೀಡಲು ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ತಜ್ಞರು ಸಲಹೆ ನೀಡಿದ್ದಾರೆ. ಅದ್ರಂತೆ, ಎರಡನೇ ಡೋಸ್ ಲಸಿಕೆ ಪಡೆಯದವರಿಗೆ ಆಸ್ಪತ್ರೆ ವೆಚ್ಚ ಭರಿಸಬಾರದು ಅಂತಾಲೂ ಸಮಿತಿ ಶಿಫಾರಸು ಮಾಡಿದೆ’ ಎಂದರು.
‘ಮಾಲ್ ಸೇರಿದಂತೆ ಆನೇಕ ಕಡೆ 2 ಡೋಸ್ ಲಸಿಕೆ ಕಡ್ಡಾಯಗೊಳಿಸುವ ಬಗ್ಗೆ ಸಿಎಂ ಜತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಇನ್ನು 2 ಡೋಸ್ ಲಸಿಕೆ ಪಡೆಯದವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಬಾರದು ಎಂದು ಸಮಿತಿ ತಜ್ಞರು ಶಿಫಾರಸು ಮಾಡಿದ್ದಾರೆ. ಆದ್ರೆ, ನಾನೇ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇವೆಲ್ಲವೂಗಳ ಕುರಿತು ಸಿಎಂ ಜತೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದರು.